ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm