ಬ್ರೇಕಿಂಗ್ ನ್ಯೂಸ್
08-06-24 10:00 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 9: ಮೋದಿ 3.0 ಕ್ಯಾಬಿನೆಟ್ ನಲ್ಲಿ ಯಾರು ಸಚಿವರಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆ ಎದ್ದಿದೆ. ಈಗಾಗಲೇ ಕಿಂಗ್ ಮೇಕರ್ ಆಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಪಕ್ಷದಿಂದ ನಾಲ್ವರು ಸಚಿವ ಸ್ಥಾನಕ್ಕೇರಲಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಜೆಡಿಯುನಿಂದ ಇಬ್ಬರು ಸಂಸದರು ಸಚಿವ ಸಂಪುಟ ಸೇರಲಿದ್ದಾರೆ.
ಟಿಡಿಪಿ ನಾಯಕರಾದ ರಾಮಮೋಹನ್ ನಾಯ್ಡು, ಹರೀಶ್ ಬಾಲಯೋಗಿ, ಡಗ್ಗುಮಲ್ಲ ಪ್ರಸಾದ್ ಸಚಿವ ಸ್ಥಾನಕ್ಕೇರುವ ಸಾಧ್ಯತೆಯಿದೆ. ಜೆಡಿಯುನಿಂದ ರಾಮನಾಥ್ ಠಾಕೂರ್ ಮತ್ತು ಲಲನ್ ಸಿಂಗ್ ಹೆಸರು ಕೇಳಿಬಂದಿದೆ. ಭಾರತ ರತ್ನ ಕರ್ಪೂರಿ ಠಾಕೂರ್ ಅವರ ಪುತ್ರನಾಗಿರುವ ರಾಮನಾಥ ಠಾಕೂರ್ ರಾಜ್ಯಸಭೆ ಸದಸ್ಯರಾಗಿದ್ದಾರೆ. ಲಲನ್ ಸಿಂಗ್ ಬಿಹಾರದ ಮುಂಗರ್ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ. ಈ ಬಾರಿ ಟಿಡಿಪಿ 16 ಮತ್ತು ಜೆಡಿಯು 12 ಸ್ಥಾನಗಳನ್ನು ಹೊಂದಿದ್ದು, ಮೋದಿ ಸರಕಾರದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
ಟಿಡಿಪಿ ಮತ್ತು ಜೆಡಿಯು ನಾಯಕರು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದರೂ, ಬಿಜೆಪಿಯೇ ಪ್ರಮುಖ ಖಾತೆಗಳನ್ನು ಇಟ್ಟುಕೊಳ್ಳುವ ಸಾಧ್ಯತೆಯಿದೆ. ಗೃಹ ಸಚಿವರಾಗಿ ಅಮಿತ್ ಷಾ, ರಕ್ಷಣಾ ಸಚಿವರಾಗಿ ರಾಜನಾಥ್ ಸಿಂಗ್, ವಿದೇಶಾಂಗ ಸಚಿವರಾಗಿ ಜೈಶಂಕರ್, ಸಾರಿಗೆಯಲ್ಲಿ ನಿತಿನ್ ಗಡ್ಕರಿ ಅವರೇ ಮುಂದುವರಿಯುವ ಸಾಧ್ಯತೆ ಇದೆ. ಹಣಕಾಸು ಸಚಿವರಾಗಿ ನಿರ್ಮಲಾ ಸೀತಾರಾಮನ್ ಬದಲಿಗೆ ಮಹಾರಾಷ್ಟ್ರದ ಪಿಯೂಷ್ ಗೋಯಲ್ ಅವರನ್ನು ನೇಮಿಸಲಾಗುತ್ತೆ ಎಂದು ಹೇಳಲಾಗುತ್ತಿದೆ. ಉಳಿದಂತೆ, ಕರ್ನಾಟಕದಿಂದ ಎಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಷಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಗೆ ಸ್ಥಾನ ಸಿಗುವ ನಿರೀಕ್ಷೆಯಿದೆ.
With just a few hours left for Narendra Modi’s third consecutive oath-taking ceremony at the Rashtrapati Bhavan on Sunday at 7.15 pm, all eyes are on the berth allocation in Modi’s Cabinet. As the Bharatiya Janata Party failed to secure an absolute majority of 272 seats in the Lok Sabha polls, it will be forming the government with the support of its NDA allies, JD(U) and TDP.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm