ಬ್ರೇಕಿಂಗ್ ನ್ಯೂಸ್
10-06-24 09:30 pm HK News Desk ದೇಶ - ವಿದೇಶ
ತಿರುವನಂತಪುರಂ, ಜೂನ್ 10: ಕೇರಳದ ತೃಶೂರು ಸಂಸದ, ಚಿತ್ರನಟ ಸುರೇಶ್ ಗೋಪಿ ಅವರು ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಸಚಿವ ಸ್ಥಾನದಲ್ಲಿರಲು ಇಷ್ಟ ಹೊಂದಿಲ್ಲ, ರಾಜಿನಾಮೆ ನೀಡಲಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವತಃ ಸುರೇಶ್ ಗೋಪಿ ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಸಂಸದ ಖಾತೆಯನ್ನು ಗೆಲ್ಲಿಸಿಕೊಟ್ಟಿರುವ ಸುರೇಶ್ ಗೋಪಿ, ಮೋದಿ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಚಿತ್ರರಂಗದಲ್ಲಿ ಬಿಝಿಯಾಗಿರುವ ಅವರು, ಸಚಿವ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಮಾಧ್ಯಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಸುರೇಶ್ ಗೋಪಿ ತನ್ನ ಫೇಸ್ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮೋದಿ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಗಳು ತಪ್ಪು ಸುದ್ದಿ ಹರಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ. ಮೋದಿ ಸರಕಾರದಲ್ಲಿ ಸಚಿವನಾಗಿರುವುದು ಮತ್ತು ಕೇರಳದ ಜನರನ್ನು ಸಂಸತ್ತಿನಲ್ಲಿ ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದಿದ್ದಾರೆ. ಮೋದಿ ಅವರ ನಿಕಟವರ್ತಿ ಎನ್ನಲಾಗುವ ಸುರೇಶ್ ಗೋಪಿ, ಕ್ರೈಸ್ತರ ಪ್ರಭಾವ ಇರುವ ತೃಶ್ಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುರಲೀಧರನ್ ವಿರುದ್ಧ 76,686 ಮತಗಳಿಂದ ಗೆಲುವು ಪಡೆದಿದ್ದಾರೆ. ರಾಜಕೀಯ ಜೀವನದ ಜೊತೆಗೆ ಚಿತ್ರರಂಗದಲ್ಲೂ ಬಿಝಿಯಾಗಿರುವ ಸುರೇಶ್ ಗೋಪಿ, ಸದ್ಯಕ್ಕೆ ನಾಲ್ಕು ಬಿಗ್ ಬಜೆಟ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
A few media platforms are spreading the incorrect news that I am going to resign from the Council of Ministers of the Modi Government. This is grossly incorrect. Under the leadership of PM @narendramodi Ji we are committed to the development and prosperity of Kerala ❤️ pic.twitter.com/HTmyCYY50H
— Suressh Gopi (@TheSureshGopi) June 10, 2024
Day after claiming that he hoped the Centre would relieve him of his fresh duties as a Union Minister, Suresh Gopi said news reports of him resigning from the Cabinet are 'grossly incorrect'.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm