ಬ್ರೇಕಿಂಗ್ ನ್ಯೂಸ್
10-06-24 10:08 pm HK News Desk ದೇಶ - ವಿದೇಶ
ಶ್ರೀನಗರ, ಜೂ 10: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿಭಾನುವಾರ ಬಸ್ವೊಂದು ಪ್ರಪಾತಕ್ಕೆ ಉರುಳಿದ್ದು, ದುರಂತದಲ್ಲಿ10 ಮಂದಿ ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ.
ಶಿವಖೋಡ ದೇವಸ್ಥಾನದಿಂದ ಕಾತ್ರಾಗೆ ಮರಳುತ್ತಿದ್ದ ಪ್ರವಾಸಿಗರಿದ್ದ ಬಸ್ ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಗಾಬರಿಗೊಂಡ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಿಂದ ಪಕ್ಕದ ಪ್ರಪಾತಕ್ಕೆ ಉರುಳಿದೆ.

ತೆರ್ಯಾಥ್ ಗ್ರಾಮದ ಬಳಿ ಘಟನೆ ಜರುಗಿದೆ. ಪ್ರಪಾತದಲ್ಲಿದ್ದ ಬಸ್ನಿಂದ 30 ಮಂದಿಯನ್ನು ಕಾರ್ಯಾಚರಣೆ ನಡೆಸಿ ಪೊಲೀಸರು ಮತ್ತು ಅರೆಸೇನಾ ಪಡೆಗಳು ರಕ್ಷಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದ ಅರಣ್ಯದಿಂದ ಏಕಾಏಕಿ ರಸ್ತೆಗೆ ಧುಮುಕಿದ ಉಗ್ರರು ಹಲವು ಸುತ್ತಿನ ಗುಂಡಿನ ದಾಳಿಯನ್ನು ಬಸ್ ಮೇಲೆ ನಡೆಸಿದ್ದಾರೆ. ದಾಳಿಯ ಸ್ಥಳದಲ್ಲಿಅಪಾರ ಸಂಖ್ಯೆಯಲ್ಲಿ ಗುಂಡುಗಳು ಪತ್ತೆಯಾಗಿವೆ,'' ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಶಂಕಿತ ಉಗ್ರರು ರಜೌರಿ, ಪೂಂಛ್ ಮತ್ತು ರಿಯಾಸಿಯ ಅರಣ್ಯ ಪ್ರದೇಶಗಳಲ್ಲಿಅಡಗಿರುವ ಸಾಧ್ಯತೆ ಇದ್ದು, ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಯಾಣಿಕರ ಗುರುತುಗಳನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ತಿಳಿದ್ದಾರೆ.
ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ 'ದಿ ರೆಸಿಸ್ಟೆನ್ಸ್ ಫ್ರಂಟ್' ವಹಿಸಿಕೊಂಡಿದೆ.
ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ' ಮೇಲೆ ಇಂತಹ ದಾಳಿಗಳನ್ನು ಮುಂದವರಿಸುತ್ತೇವೆ ಎಂಬುದಾಗಿಯೂ ಉಗ್ರರು ಹೇಳಿಕೊಂಡಿದ್ದಾರೆ. ಅಲ್ಲದೆ ರಿಯಾಸಿ ದಾಳಿಯನ್ನು 'ಹೊಸ ಆರಂಭಕ್ಕೆ ಮುನ್ನುಡಿ' ಎಂದು ಕರೆದಿದೆ.
ಭಯೋತ್ಪಾದಕರನ್ನು ಪತ್ತೆಹಚ್ಚಲು ಉಗ್ರ ನಿಗ್ರ ದಳದ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
The deadly terror attack in Jammu and Kashmir’s Reasi district has shocked India. At least nine people died and 33 were injured after terrorists fired upon a bus carrying Hindu pilgrims, resulting in the vehicle plunging into a deep gorge on Sunday (9 June).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm