ಬ್ರೇಕಿಂಗ್ ನ್ಯೂಸ್
12-06-24 06:15 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ಕುವೈತ್ ದಕ್ಷಿಣ ಭಾಗದ ಮಂಗಾಫ್ ಬ್ಲಾಕ್ ನಲ್ಲಿ ಆರು ಮಹಡಿಯ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿದ್ದು, ಹತ್ತು ಭಾರತೀಯರು ಸೇರಿದಂತೆ 41 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಕುವೈತ್ ಕಾಲಮಾನ ಬೆಳಗ್ಗೆ 5ರಿಂದ 7 ಗಂಟೆಯ ನಡುವೆ ಬೆಂಕಿ ಅವಘಡ ಸಂಭವಿಸಿದೆ.
ಕಿಚನ್ ಕೊಠಡಿ ಒಂದರಲ್ಲಿ ಬೆಂಕಿ ಹತ್ತಿಕೊಂಡಿದ್ದು, ಆನಂತರ, ಇಡೀ ಕಟ್ಟಡಕ್ಕೆ ಪೂರ್ತಿಯಾಗಿ ಬೆಂಕಿ ಆವರಿಸಿದೆ. ಆನಂತರ ಮೇಲ್ಭಾಗಕ್ಕೂ ಬೆಂಕಿ ಹರಡಿದ್ದು, ಜನರು ಭೀತಿಯಿಂದ ಪ್ರಾಣ ಉಳಿಸಿಕೊಳ್ಳುವ ಸಲುವಾಗಿ ಐದನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾರೆ. ಮಹಡಿಯಿಂದ ಕೆಳಕ್ಕೆ ಹಾರಿ ಕೆಲವರು ಪ್ರಾಣ ಕಳಕೊಂಡಿದ್ದಾರೆ. ಮೃತರಲ್ಲಿ ಐವರು ಕೇರಳದ ಮಲಯಾಳಿಗಳಾಗಿದ್ದು, ಒಟ್ಟು ಹತ್ತು ಮಂದಿ ಭಾರತೀಯರು ಸಾವು ಕಂಡಿದ್ದಾರೆ ಎನ್ನುವ ಮಾಹಿತಿಯಿದೆ.

ಬಿಲ್ಡಿಂಗ್ ಕಟ್ಟಡವು ಎನ್ ಬಿಟಿಸಿ ಗ್ರೂಪ್ ಚೇರ್ಮನ್ ಕೇರಳ ಮೂಲದ ಕೆ.ಜಿ.ಅಬ್ರಹಾಂ ಎಂಬವರಿಗೆ ಸೇರಿದ್ದು, 195 ಮಂದಿ ಅವರದೇ ಕಂಪನಿಯ ಕಾರ್ಮಿಕರು ಕಟ್ಟಡದಲ್ಲಿ ವಾಸವಿದ್ದರು. ಇವರಲ್ಲಿ ಕೇರಳ, ತಮಿಳುನಾಡು, ಉತ್ತರ ಭಾರತೀಯರು ಇದ್ದರು. ಬುಧವಾರ ಬೆಳಗ್ಗೆ ಆರು ಗಂಟೆಗೆ ಏಕಾಏಕಿ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡಿತ್ತು. ಇಡೀ ಕಟ್ಟಡಕ್ಕೆ ಬೆಂಕಿ ಮತ್ತು ಹೊಗೆ ಆವರಿಸಿದ್ದು ಹೆಚ್ಚಿನವರು ಮಲಗಿದ್ದಲ್ಲೇ ಹೊಗೆಯಿಂದ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಕುವೈತ್ ಉಪ ಪ್ರಧಾನಿ ಬೆಂಕಿ ಘಟನೆ ಸಂಬಂಧಿಸಿ ತನಿಖೆಗೆ ಆದೇಶ ಮಾಡಿದ್ದು, ಅಪಾರ್ಟ್ಮೆಂಟ್ ಕಟ್ಟಡದ ಮಾಲೀಕನನ್ನೂ ಬಂಧಿಸುವಂತೆ ಆದೇಶ ಮಾಡಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಕಾರ್ಮಿಕರು ವಾಸವಿದ್ದ ಕೊಠಡಿ ಒಂದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯ ವೇಳೆಗೆ ಬೆಂಕಿ ಹತ್ತಿಕೊಂಡಿದೆ. ಅಲ್ಲಿಂದ ಗ್ಯಾಸ್ ಕೊಳವೆಯ ಮೂಲಕ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದ್ದು, ಪ್ರತಿ ಮನೆಯಲ್ಲೂ ಬೆಂಕಿ ಮತ್ತು ಹೊಗೆ ಆವರಿಸುವಂತೆ ಮಾಡಿದೆ. ಇಡೀ ಕಟ್ಟಡದಲ್ಲಿ ಗ್ಯಾಸ್ ಪೈಪ್ ಲೈನ್ ಇದ್ದುದೇ ಬೆಂಕಿ ದಿಢೀರ್ ಆವರಿಸಲು ಕಾರಣ ಎನ್ನಲಾಗುತ್ತಿದೆ.
The fire broke out at 4:30 am local time in the kitchen of a residential building. By the time authorities were informed at 6 am, the fire had spread rapidly, trapping many inside. According to Kuwait Times, about 160 workers of the same company were residing in the building. A Kerala-based website, Onmanorama, stated that five individuals from Kerala are among the ten Indians who perished in the incident.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm