ಬ್ರೇಕಿಂಗ್ ನ್ಯೂಸ್
17-06-24 10:56 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17: ಲೋಕಸಭೆ ಚುನಾವಣೆಯಲ್ಲಿ ಎರಡು ಕಡೆ ಗೆದ್ದಿದ್ದ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರವನ್ನು ಕೊನೆಗೂ ತ್ಯಜಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಈ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಿದೆ.
ರಾಹುಲ್ ಗಾಂಧಿ ಅವರಿಂದ ತೆರವಾಗಲಿರುವ ವಯನಾಡು ಲೋಕಸಭೆ ಕ್ಷೇತ್ರದಿಂದ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ಆಮೂಲಕ ಪ್ರಿಯಾಂಕಾ ಕಡೆಗೂ ಚುನಾವಣಾ ರಾಜಕಾರಣಕ್ಕೆ ಪ್ರವೇಶ ಮಾಡುವುದು ಖಚಿತವಾಗಿದೆ.
ನಿಯಮಗಳ ಪ್ರಕಾರ, ಜೂನ್ 4 ರಂದು ಹೊರಬಿದ್ದ ಲೋಕಸಭೆಯ ಫಲಿತಾಂಶದ 14 ದಿನಗಳಲ್ಲಿ ರಾಹುಲ್ ಗಾಂಧಿ ಒಂದು ಸ್ಥಾನವನ್ನು ಖಾಲಿ ಮಾಡಬೇಕಾಗಿತ್ತು. ಇದೀಗ ರಾಹುಲ್ ಗಾಂಧಿ ರಾಯ್ ಬರೇಲಿ ಸಂಸದ ಸ್ಥಾನವನ್ನು ಉಳಿಸಿಕೊಂಡಿದ್ದು ಮುಸ್ಲಿಂ ಬಾಹುಳ್ಯದ ಕಾಂಗ್ರೆಸ್ ಭದ್ರಕೋಟೆ ವಯನಾಡು ಕ್ಷೇತ್ರದಲ್ಲಿ ಮರು ಚುನಾವಣೆಗೆ ಅವಕಾಶ ನೀಡಿದ್ದಾರೆ.
ಪ್ರಿಯಾಂಕಾ ಅವರು ವಯನಾಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಟ್ವೀಟ್ ಮಾಡಿದ್ದು ಕಾನೂನಿನ ಪ್ರಕಾರ ರಾಹುಲ್ ಅವರು ಒಂದನ್ನು ತೆರವು ಮಾಡಬೇಕು. ಅದರಂತೆ, ರಾಯ್ ಬರೇಲಿಯನ್ನು ರಾಹುಲ್ ಉಳಿಸಿಕೊಂಡಿದ್ದು, ಪ್ರಿಯಾಂಕಾ ವಯನಾಡಿನಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಯನಾಡು ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ಅತ್ಯಧಿಕ ಆರು ಲಕ್ಷದಷ್ಟಿದ್ದು ಕಾಂಗ್ರೆಸ್ ಗೆಲುವಿಗೆ ದೊಡ್ಡ ಕೊಡುಗೆ ನೀಡಿದೆ. ಮುಸ್ಲಿಂ ಮತ ಯಾರಿಗೆ ಬೀಳುತ್ತಾ ಅವರು ಗೆಲ್ಲುತ್ತಾರೆ. ಇದೇ ಕಾರಣಕ್ಕೆ ರಾಹುಲ್ ಗೆಲುವಿಗೆ ಇದೇ ಕ್ಷೇತ್ರ ಆಯ್ಕೆ ಮಾಡಲಾಗಿತ್ತು. ಇದೀಗ ಪ್ರಿಯಾಂಕಾ ಸ್ಪರ್ಧಿಸಿದರೂ, ಕಾಂಗ್ರೆಸ್ ಗೆಲ್ಲುವುದು ಖಚಿತ. ಆಮೂಲಕ ಅಣ್ಣ- ತಂಗಿಯ ಜೋಡಿ ಸಂಸತ್ತಿನಲ್ಲಿ ಬಿಜೆಪಿಯನ್ನು ಎದುರಿಸಲು ಸಜ್ಜಾದಂತಿದೆ. ಅಲ್ಲದೆ, 99 ಸದಸ್ಯರನ್ನು ಹೊಂದಿರುವ ಕಾಂಗ್ರೆಸಿಗೆ ನೂರನೇ ಸ್ಥಾನದ ಕೊಡುಗೆ ನೀಡಲಿದ್ದಾರೆ.
ಬಹುತೇಕ ವಿವಿಧ ರಾಜ್ಯಗಳಲ್ಲಿ ತೆರವಾದ ಅಸೆಂಬ್ಲಿ ಕ್ಷೇತ್ರಗಳು ಹಾಗೂ ಲೋಕಸಭೆ ಕ್ಷೇತ್ರಗಳಲ್ಲಿ ಒಂದೇ ಬಾರಿಗೆ ಉಪ ಚುನಾವಣೆ ಘೋಷಣೆಯಾಗಲಿದೆ.
Congress president Rahul Gandhi, who won two seats in the Lok Sabha elections, has finally quit the Wayanad constituency in Kerala. A statement from the Congress party said that Rahul Gandhi will vacate the Wayanad Lok Sabha seat and retain the Rae Bareli seat in Uttar Pradesh.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm