ಬ್ರೇಕಿಂಗ್ ನ್ಯೂಸ್
19-06-24 07:22 pm HK News Desk ದೇಶ - ವಿದೇಶ
ದಿಸ್ಪುರ್, ಜೂ.19: ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೆ ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಪ್ರಸ್ತುತ ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ 2009ರ ಬ್ಯಾಚ್ನ ಡಿಐಜಿ ಶ್ರೇಣಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ (44) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಆಗಮೊನೀ ಬಾರ್ಬರುವಾ ಕಳೆದ 2 ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ನೆಮ್ಕೇರ್ ಖಾಸಗಿ ಆಸ್ಪತ್ರೆಗೆ ಎರಡು ತಿಂಗಳು ಹಿಂದೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ 4 ತಿಂಗಳಿನಿಂದ ರಜೆಯಲ್ಲಿದ್ದರು.
ಪತ್ನಿಯನ್ನು ಆಸ್ಪತ್ರೆಯ ಐಸಿಯುನಲ್ಲಿ ದಾಖಲು ಮಾಡಿದ ಮೇಲೆ 2 ತಿಂಗಳುಗಳಿಂದ ಆಸ್ಪತ್ರೆಯಲ್ಲಿ ತಂಗಿದ್ದರು. ಇದಕ್ಕಾಗಿ ಅನುಮತಿ ಪಡೆದುಕೊಂಡು ಪ್ರತ್ಯೇಕ ರೂಮ್ ತೆಗೆದುಕೊಂಡಿದ್ದರು. ಕಳೆದ 3 ದಿನಗಳಿಂದ ಅವರ ಪತ್ನಿಯ ಸ್ಥಿತಿ ಚಿಂತಾಜನಕವಾಗಿತ್ತು. ಅದರಂತೆ ಅವರು ಆಸ್ಪತ್ರೆಯ ಐಸಿಯುನಲ್ಲಿ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಅಲ್ಲೇ ಇದ್ದ ಗಂಡನಿಗೆ ವೈದ್ಯರು ತಿಳಿಸಿದ್ದಾರೆ.
ಐಸಿಯುನಲ್ಲಿದ್ದ ಮೃತ ಪತ್ನಿ ಬಳಿಗೆ ತಕ್ಷಣ ಗಾಬರಿಯಿಂದ ಓಡೋಡಿ ಬಂದು ದುಃಖಿತರಾಗಿದ್ದಾರೆ. ಬಳಿಕ ನಾನು ಪ್ರಾರ್ಥನೆ ಮಾಡಬೇಕೆಂದು ಹೇಳಿ ಐಸಿಯುನಲ್ಲಿದ್ದ ಡಾಕ್ಟರ್ಸ್, ನರ್ಸ್ಗಳನ್ನ ಹೊರಗೆ ಕಳುಹಿಸಿದ್ದಾರೆ. ಇದಾದ 10 ನಿಮಿಷದ ಬಳಿಕ ತಮ್ಮಲ್ಲಿದ್ದ ಸರ್ಕಾರದ ಗನ್ನಿಂದ ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸೌಂಡ್ ಕೇಳುತ್ತಿದ್ದಂತೆ ಅಸ್ಪತ್ರೆಯ ಸಿಬ್ಬಂದಿ, ಡಾಕ್ಟರ್ಸ್ ಎಲ್ಲ ಓಡೋಡಿ ಬಂದು ಏನಾಯಿತು ಎಂದು ನೋಡಿದ್ದಾರೆ. ಆದ್ರೆ ಪತ್ನಿ ಪಕ್ಕದಲ್ಲೇ ಗಂಡ ಶವವಾಗಿ ಬಿದ್ದಿದ್ದರು. ಸದ್ಯ ಇವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಸ್ಸಾಂನ ಇಡೀ ಪೊಲೀಸ್ ಕುಟುಂಬಗಳು ಸಂತಾಪ ವ್ಯಕ್ತಪಡಿಸಿವೆ.
Assam's Home Secretary Siladitya Chetia allegedly died by suicide at a private hospital in Guwahati after his wife passed away following prolonged illness on Tuesday, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm