ಬ್ರೇಕಿಂಗ್ ನ್ಯೂಸ್
19-06-24 07:22 pm HK News Desk ದೇಶ - ವಿದೇಶ
ದಿಸ್ಪುರ್, ಜೂ.19: ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದ ತನ್ನ ಹೆಂಡತಿ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಶೂಟ್ ಮಾಡಿಕೊಂಡು ಅದೆ ರೂಮ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂನ ಗುವಾಹಟಿ ನಗರದಲ್ಲಿರುವ ನೆಮ್ಕೇರ್ ಎನ್ನುವ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಪ್ರಸ್ತುತ ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ 2009ರ ಬ್ಯಾಚ್ನ ಡಿಐಜಿ ಶ್ರೇಣಿಯ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ (44) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತ್ನಿ ಆಗಮೊನೀ ಬಾರ್ಬರುವಾ ಕಳೆದ 2 ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹೀಗಾಗಿ ಇವರನ್ನು ನೆಮ್ಕೇರ್ ಖಾಸಗಿ ಆಸ್ಪತ್ರೆಗೆ ಎರಡು ತಿಂಗಳು ಹಿಂದೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಪತ್ನಿ ಅನಾರೋಗ್ಯ ಹಿನ್ನೆಲೆಯಲ್ಲಿ ಸರ್ಕಾರದ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ 4 ತಿಂಗಳಿನಿಂದ ರಜೆಯಲ್ಲಿದ್ದರು.
ಪತ್ನಿಯನ್ನು ಆಸ್ಪತ್ರೆಯ ಐಸಿಯುನಲ್ಲಿ ದಾಖಲು ಮಾಡಿದ ಮೇಲೆ 2 ತಿಂಗಳುಗಳಿಂದ ಆಸ್ಪತ್ರೆಯಲ್ಲಿ ತಂಗಿದ್ದರು. ಇದಕ್ಕಾಗಿ ಅನುಮತಿ ಪಡೆದುಕೊಂಡು ಪ್ರತ್ಯೇಕ ರೂಮ್ ತೆಗೆದುಕೊಂಡಿದ್ದರು. ಕಳೆದ 3 ದಿನಗಳಿಂದ ಅವರ ಪತ್ನಿಯ ಸ್ಥಿತಿ ಚಿಂತಾಜನಕವಾಗಿತ್ತು. ಅದರಂತೆ ಅವರು ಆಸ್ಪತ್ರೆಯ ಐಸಿಯುನಲ್ಲಿ ಇಂದು ಸಂಜೆ ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಅಲ್ಲೇ ಇದ್ದ ಗಂಡನಿಗೆ ವೈದ್ಯರು ತಿಳಿಸಿದ್ದಾರೆ.
ಐಸಿಯುನಲ್ಲಿದ್ದ ಮೃತ ಪತ್ನಿ ಬಳಿಗೆ ತಕ್ಷಣ ಗಾಬರಿಯಿಂದ ಓಡೋಡಿ ಬಂದು ದುಃಖಿತರಾಗಿದ್ದಾರೆ. ಬಳಿಕ ನಾನು ಪ್ರಾರ್ಥನೆ ಮಾಡಬೇಕೆಂದು ಹೇಳಿ ಐಸಿಯುನಲ್ಲಿದ್ದ ಡಾಕ್ಟರ್ಸ್, ನರ್ಸ್ಗಳನ್ನ ಹೊರಗೆ ಕಳುಹಿಸಿದ್ದಾರೆ. ಇದಾದ 10 ನಿಮಿಷದ ಬಳಿಕ ತಮ್ಮಲ್ಲಿದ್ದ ಸರ್ಕಾರದ ಗನ್ನಿಂದ ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸೌಂಡ್ ಕೇಳುತ್ತಿದ್ದಂತೆ ಅಸ್ಪತ್ರೆಯ ಸಿಬ್ಬಂದಿ, ಡಾಕ್ಟರ್ಸ್ ಎಲ್ಲ ಓಡೋಡಿ ಬಂದು ಏನಾಯಿತು ಎಂದು ನೋಡಿದ್ದಾರೆ. ಆದ್ರೆ ಪತ್ನಿ ಪಕ್ಕದಲ್ಲೇ ಗಂಡ ಶವವಾಗಿ ಬಿದ್ದಿದ್ದರು. ಸದ್ಯ ಇವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಸ್ಸಾಂನ ಇಡೀ ಪೊಲೀಸ್ ಕುಟುಂಬಗಳು ಸಂತಾಪ ವ್ಯಕ್ತಪಡಿಸಿವೆ.
Assam's Home Secretary Siladitya Chetia allegedly died by suicide at a private hospital in Guwahati after his wife passed away following prolonged illness on Tuesday, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm