ಬ್ರೇಕಿಂಗ್ ನ್ಯೂಸ್
20-06-24 11:56 am HK News Desk ದೇಶ - ವಿದೇಶ
ನವದೆಹಲಿ, ಜೂನ್.20: ದೇಶದಲ್ಲಿ ‘ನೀಟ್’ ಪರೀಕ್ಷೆ ವಿವಾದಕ್ಕೀಡಾಗಿರುವಾಗಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಎರಡು ದಿನಗಳ ಹಿಂದೆ ನಡೆಸಿದ್ದ ‘ಯುಜಿಸಿ-ನೆಟ್’ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಪಡಿಸಿದೆ. ದೇಶಾದ್ಯಂತ ಪರೀಕ್ಷೆಯನ್ನು ನಡೆಸಿದ ಒಂದೇ ದಿನದ ಅಂತರದಲ್ಲಿ ರದ್ದುಪಡಿಸುವ ತೀರ್ಮಾನ ತೆಗೆದುಕೊಂಡಿದ್ದು ಅಕ್ರಮದ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ದೇಶಾದ್ಯಂತ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪಡೆಯಲು ಮತ್ತು ಜೂನಿಯರ್ ಸಂಶೋಧನಾ ಫೆಲೋಶಿಪ್ಗೆ ಅರ್ಹತೆಯನ್ನು ನಿರ್ಧರಿಸಲು ಪ್ರತಿ ವರ್ಷ ನಡೆಯುವ ಈ ಪರೀಕ್ಷೆಗೆ ಈ ಬಾರಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 18ರಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹಲವು ವರ್ಷಗಳ ಬಳಿಕ ಈ ಬಾರಿ ಕಂಪ್ಯೂಟರ್ ಬದಲು ಓಎಂಆರ್ ಪ್ರಶ್ನೆ ಪತ್ರಿಕೆಯ ಮೂಲಕ ಆಫ್ ಲೈನಲ್ಲಿ ಪರೀಕ್ಷೆ ನಡೆದಿತ್ತು.


ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು’ ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. 2024ರ ಯುಜಿಸಿ ನೆಟ್ ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.
ನೀಟ್ ಪರೀಕ್ಷೆಯಲ್ಲು ಅಕ್ರಮ
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳನ್ನು ಖಾತ್ರಿಪಡಿಸಲು ಇತ್ತೀಚೆಗೆ ನಡೆದ ಯುಜಿಸಿ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಕೇಂದ್ರ ಸರಕಾರ ಎಚ್ಚತ್ತುಕೊಂಡಿದೆ. ದೆಹಲಿ, ಬಿಹಾರ, ಪಂಜಾಬ್, ಗುಜರಾತ್ ನಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಶಂಕೆಯಿದ್ದು ನೂರಾರು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಅಕ್ರಮದ ವಾಸನೆ ಎಬ್ಬಿಸಿದೆ. ಕೋಚಿಂಗ್ ಸೆಂಟರ್ ಗಳಿಂದಲೇ ಈ ರೀತಿಯ ಅಕ್ರಮ ನಡೆದಿರುವ ಶಂಕೆಯಿದ್ದು ಉತ್ತರ ಭಾರತದಲ್ಲಿ 15ಕ್ಕು ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದೆ.
Anurag Yadav, the National Eligibility-cum-Entrance Test (NEET) candidate arrested in connection with the result irregularities, has admitted that the leaked question paper provided to him matched the actual exam question paper.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm