ಬ್ರೇಕಿಂಗ್ ನ್ಯೂಸ್
20-06-24 11:56 am HK News Desk ದೇಶ - ವಿದೇಶ
ನವದೆಹಲಿ, ಜೂನ್.20: ದೇಶದಲ್ಲಿ ‘ನೀಟ್’ ಪರೀಕ್ಷೆ ವಿವಾದಕ್ಕೀಡಾಗಿರುವಾಗಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಎರಡು ದಿನಗಳ ಹಿಂದೆ ನಡೆಸಿದ್ದ ‘ಯುಜಿಸಿ-ನೆಟ್’ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಪಡಿಸಿದೆ. ದೇಶಾದ್ಯಂತ ಪರೀಕ್ಷೆಯನ್ನು ನಡೆಸಿದ ಒಂದೇ ದಿನದ ಅಂತರದಲ್ಲಿ ರದ್ದುಪಡಿಸುವ ತೀರ್ಮಾನ ತೆಗೆದುಕೊಂಡಿದ್ದು ಅಕ್ರಮದ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.
ದೇಶಾದ್ಯಂತ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಸರಕಾರಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಪಡೆಯಲು ಮತ್ತು ಜೂನಿಯರ್ ಸಂಶೋಧನಾ ಫೆಲೋಶಿಪ್ಗೆ ಅರ್ಹತೆಯನ್ನು ನಿರ್ಧರಿಸಲು ಪ್ರತಿ ವರ್ಷ ನಡೆಯುವ ಈ ಪರೀಕ್ಷೆಗೆ ಈ ಬಾರಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 18ರಂದು ಕರ್ನಾಟಕ ಸೇರಿದಂತೆ ದೇಶಾದ್ಯಂತ ಎಲ್ಲ ರಾಜ್ಯಗಳಲ್ಲಿ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಹಲವು ವರ್ಷಗಳ ಬಳಿಕ ಈ ಬಾರಿ ಕಂಪ್ಯೂಟರ್ ಬದಲು ಓಎಂಆರ್ ಪ್ರಶ್ನೆ ಪತ್ರಿಕೆಯ ಮೂಲಕ ಆಫ್ ಲೈನಲ್ಲಿ ಪರೀಕ್ಷೆ ನಡೆದಿತ್ತು.
ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ನಿಂದ ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರಬಹುದು’ ಎಂಬ ಮಾಹಿತಿಯನ್ನು ಪಡೆದ ನಂತರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. 2024ರ ಯುಜಿಸಿ ನೆಟ್ ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.
ನೀಟ್ ಪರೀಕ್ಷೆಯಲ್ಲು ಅಕ್ರಮ
ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳನ್ನು ಖಾತ್ರಿಪಡಿಸಲು ಇತ್ತೀಚೆಗೆ ನಡೆದ ಯುಜಿಸಿ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಕೇಂದ್ರ ಸರಕಾರ ಎಚ್ಚತ್ತುಕೊಂಡಿದೆ. ದೆಹಲಿ, ಬಿಹಾರ, ಪಂಜಾಬ್, ಗುಜರಾತ್ ನಲ್ಲಿ ನೀಟ್ ಪರೀಕ್ಷೆ ಅಕ್ರಮ ನಡೆದಿರುವ ಶಂಕೆಯಿದ್ದು ನೂರಾರು ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವುದು ಅಕ್ರಮದ ವಾಸನೆ ಎಬ್ಬಿಸಿದೆ. ಕೋಚಿಂಗ್ ಸೆಂಟರ್ ಗಳಿಂದಲೇ ಈ ರೀತಿಯ ಅಕ್ರಮ ನಡೆದಿರುವ ಶಂಕೆಯಿದ್ದು ಉತ್ತರ ಭಾರತದಲ್ಲಿ 15ಕ್ಕು ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದೆ.
Anurag Yadav, the National Eligibility-cum-Entrance Test (NEET) candidate arrested in connection with the result irregularities, has admitted that the leaked question paper provided to him matched the actual exam question paper.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm