ಬ್ರೇಕಿಂಗ್ ನ್ಯೂಸ್
26-06-24 05:50 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 26: 48 ವರ್ಷಗಳ ಬಳಿಕ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಎನ್ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹುದ್ದೆಗೆ ಅವಿರೋಧ ಆಯ್ಕೆ ಮಾಡಲಾಗುತ್ತದೆ. ಆದರೆ ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಇಳಿಸಿದ್ದರಿಂದ ಚುನಾವಣೆ ನಡೆದಿತ್ತು.
ಇಂಡಿಯಾ ಬಣದಿಂದ ಕಾಂಗ್ರೆಸಿನ ಎಂಟು ಬಾರಿಯ ಸಂಸದ ಕೋಡಿಕುನ್ನಿಲ್ ಸುರೇಶ್ ಅವರನ್ನು ಕಣಕ್ಕಿಳಿಸಲಾಗಿತ್ತು. ಭಾರೀ ಕುತೂಹಲ ಮೂಡಿಸಿದ್ದ ಈ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಾಖಡ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಗೆ ಆಯ್ಕೆಯಾಗಿದ್ದರೂ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್ ಭಾರ್ತೃಹರಿ ಮಹತಾಬ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಆರಂಭದಲ್ಲಿ ಎನ್ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನ ಮಾಡಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿಯಾ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂದು ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಕೋಡಿಕುನ್ನಿಲ್ ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲ ಸದಸ್ಯರು ಹಾಜರಾಗುವಂತೆ ವಿಪ್ ಜಾರಿ ಮಾಡಿದ್ದವು.
BJP MP Om Birla was elected speaker of the 18th Lok Sabha after Prime Minister Narendra Modi moved a motion to elect the NDA nominee for his second term.“I congratulate you on behalf of entire House and look forward to your guidance for next five years,” said Mr. Modi.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm