ಬ್ರೇಕಿಂಗ್ ನ್ಯೂಸ್
29-06-24 07:21 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಜಮ್ಮು ಕಾಶ್ಮೀರದ ಲಡಾಖ್ ಪ್ರಾಂತ್ಯದ ಚೀನಾ ಗಡಿಭಾಗದಲ್ಲಿ ನದಿಯೊಂದನ್ನು ಯುದ್ಧ ಟ್ಯಾಂಕರಿನಲ್ಲಿ ದಾಟುತ್ತಿದ್ದಾಗ ಒಮ್ಮೆಲೇ ನೀರಿನ ಪ್ರಮಾಣ ಹೆಚ್ಚಾಗಿ ಅದರಲ್ಲಿದ್ದ ಐವರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಲಡಾಖ್ ಗಡಿಭಾಗದ ದೌಲತ್ ಬೇಗ್ ಓಲ್ಡೀ ಏರಿಯಾದಲ್ಲಿ ಘಟನೆ ನಡೆದಿದ್ದು, ಚೀನಾ ಭಾಗದಿಂದ ಹರಿದು ಬರುವ ನ್ಯೋಮಾ ಚುಶೂಲ್ ಎನ್ನುವ ನದಿಯನ್ನು ದಾಟುತ್ತಿದ್ದಾಗ ದುರಂತ ಉಂಟಾಗಿದೆ. ಟಿ-72 ಹೆಸರಿನ ಯುದ್ಧ ಟ್ಯಾಂಕರನ್ನು ನಸುಕಿನಲ್ಲಿ ಐವರು ಯೋಧರು ದಾಟಿಸುತ್ತಿದ್ದಾಗ ಒಮ್ಮಿಂದೊಮ್ಮೆಲೇ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ಪ್ರವಾಹದಲ್ಲಿ ಸಿಲುಕಿದ ಐವರು ಯೋಧರು ಕೊಚ್ಚಿ ಹೋಗಿದ್ದು ದುರಂತ ಸಾವಿಗೀಡಾಗಿದ್ದಾರೆ.
ಯುದ್ಧ ಟ್ಯಾಂಕ್ ನದಿಯ ಮಧ್ಯೆ ಸ್ಥಗಿತಗೊಂಡಿದ್ದರಿಂದ ದುರ್ಘಟನೆ ಸಂಭವಿಸಿದೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಲು ಯತ್ನಿಸಿದ್ದು, ನೀರಿನ ಪ್ರವಾಹ ಹೆಚ್ಚಿದ್ದರಿಂದ ಸಾಧ್ಯವಾಗಲಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ತರಬೇತಿ ಉದ್ದೇಶದ ಭಾಗವಾಗಿ ಯೋಧರು ಯುದ್ಧ ಟ್ಯಾಂಕ್ ಅನ್ನು ನದಿ ದಾಟಿಸುತ್ತಿದ್ದರು. ಅದೇ ಸಂದರ್ಭದಲ್ಲಿ ದುರ್ಘಟನೆ ಆಗಿದ್ದು ಆರ್ಮಿ ಚೀಫ್ ಮನೋಜ್ ಪಾಂಡೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಲ್ಲಿ ಐವರು ಭೂಸೇನೆಯ ಸೈನಿಕರು ಮತ್ತು ಒಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿ ಇದ್ದಾರೆ. ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಯಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಶಿಮ್ಲಾ, ಕುಲು, ಕಿನ್ನೌರ್ ಜಿಲ್ಲೆಗಳಲ್ಲಿ ಭೂಕುಸಿತ ಘಟನೆಗಳು ನಡೆದಿವೆ. ಶಿಮ್ಲಾದಲ್ಲಿ ಭೂಕುಸಿತದಿಂದ ಹಲವಾರು ವಾಹನಗಳು ಜಖಂ ಆಗಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
Five soldiers of the Indian Army died after they were swept away in flash floods while their tank was crossing a river in the Daulat Beg Oldie area of eastern Ladakh. The area is near the Line of Actual Control with China.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm