ಬ್ರೇಕಿಂಗ್ ನ್ಯೂಸ್
01-07-24 10:57 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 1: ಪ್ರತಿಪಕ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಬಿಜೆಪಿ ಮತ್ತು ಹಿಂದುಗಳ ಬಗ್ಗೆ ಆಡಿರುವ ಮಾತು ವಿವಾದದ ಕಿಡಿ ಎಬ್ಬಿಸಿದೆ. ತಮ್ಮನ್ನು ಹಿಂದುಗಳೆಂದು ಹೇಳಿಕೊಳ್ಳುವ ನಮ್ಮ ಮಹಾ ನಾಯಕರು ಅಹಿಂಸೆ ಬಗ್ಗೆ ಮಾತನಾಡುತ್ತಾರೆ, ಆದರೆ ದಿನಪೂರ್ತಿ ಹಿಂಸೆ, ದ್ವೇಷವನ್ನೇ ಹಬ್ಬಿಸುತ್ತಿದ್ದಾರೆ. ನೀವು ಹಿಂದುಗಳೇ ಅಲ್ಲ ಎಂದು ನೇರವಾಗಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು ಭಾರೀ ಟೀಕೆ ವ್ಯಕ್ತವಾಗಿದೆ.
ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ರಾಹುಲ್ ಗಾಂಧಿ ಹಿಂದುಗಳನ್ನು ಅವಮಾನಿಸಿದ್ದಾರೆಂದು ಆರೋಪಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಸಂಸತ್ತಿನಲ್ಲಿ ಮೊದಲ ಬಾರಿಗೆ ರಾಹುಲ್ ಗಾಂಧಿ ಮಾತನಾಡಿದ್ದು, ಸಂವಿಧಾನದ ಪ್ರತಿ ಮತ್ತು ಶಿವ ದೇವರ ಫೋಟೋ ಹಿಡಿದು ಭಾಷಣ ಮಾಡಿದ್ದು ಮೊದಲ ಮಾತಿನಲ್ಲೇ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿ ಮತ್ತು ಆರೆಸ್ಸೆಸ್ ಎಲ್ಲ ಹಿಂದುಗಳನ್ನು ಪ್ರತಿನಿಧಿಸುವುದಿಲ್ಲ. ಇವರು ದೇಶದಲ್ಲಿ ಭಯ ಮತ್ತು ದ್ವೇಷವನ್ನು ಮೂಡಿಸುತ್ತಿದ್ದಾರೆ. ನಿಮ್ಮನ್ನು ಹೇಗೆ ಹಿಂದುಗಳೆಂದು ಒಪ್ಪಿಕೊಳ್ಳುವುದು. ಹಿಂದುಗಳು ಯಾವತ್ತೂ ದ್ವೇಷ ಹಬ್ಬಿಸುವುದಿಲ್ಲ ಎಂದು ಹೇಳಿದ್ದಾರೆ.
ಇದರ ಬೆನ್ನಲ್ಲೇ ಸಂಸತ್ತಿನಲ್ಲಿ ಆಡಳಿತ ಪಕ್ಷಗಳು ಗದ್ದಲ ಎಬ್ಬಿಸಿದ್ದು, ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಇಡೀ ಹಿಂದು ಸಮುದಾಯವನ್ನು ಹಿಂಸಾಕಾರರು ಎಂದು ಹೇಳಿರುವುದು ಗಂಭೀರ ವಿಷಯ. ಪ್ರತಿಪಕ್ಷ ನಾಯಕನಾಗಿ, ಸಂವಿಧಾನ ಹಿಡಿದು ಪ್ರಮಾಣ ಎಸಗಿದ ವ್ಯಕ್ತಿ ಒಂದು ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಆದರೆ ರಾಹುಲ್ ತನ್ನ ಮಾತನ್ನು ಮುಂದುವರಿಸಿದ್ದಾರೆ. ಶಿವನ ಮತ್ತು ಗುರುನಾನಕ್ ಫೋಟೋ ಹಿಡಿದು ಹಿಂದುಗಳು ಯಾವತ್ತೂ ದ್ವೇಷ, ಭಯ ಹಬ್ಬಿಸುವುದಿಲ್ಲ. ಆದರೆ ಬಿಜೆಪಿಯವರು 24 ಗಂಟೆ ಪೂರ್ತಿ ದ್ವೇಷ ಹಬ್ಬಿಸುತ್ತಿದ್ದಾರೆ ಎಂದು ಟೀಕಿಸಿದರು.
ಗೃಹ ಸಚಿವ ಅಮಿತ್ ಷಾ ಅವರು ರಾಹುಲ್ ಮಾತನ್ನು ಖಂಡಿಸಿ ಸಂಸತ್ತಿನಲ್ಲೇ ಹೇಳಿಕೆ ನೀಡಿದ್ದು, ವ್ಯವಸ್ಥಿತವಾಗಿ ಭಾರತವನ್ನು, ಭಾರತೀಯರನ್ನು ಅವಮಾನ ಮಾಡಿದ್ದಾರೆ. ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಪ್ರತಿಪಕ್ಷದ ನಾಯಕರಾಗಿ ಹಿಂದುಗಳೇ ದೇಶದಲ್ಲಿ ಹಿಂಸೆ ಹಬ್ಬಿಸುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಕೋಟ್ಯಂತರ ಜನರು ತಮ್ಮನ್ನು ಹಿಂದುಗಳೆಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತಾರೆ ಎಂಬುದನ್ನು ಇವರು ತಿಳಿದಿಲ್ಲ. ಯಾವುದೇ ಧರ್ಮವನ್ನು ಹಿಂಸೆಯ ಜೊತೆಗೆ ಸಮೀಕರಿಸುವುದನ್ನು ನಾನು ಒಪ್ಪಲ್ಲ. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಕ್ಷಮೆಯನ್ನು ಕೇಳಲೇಬೇಕು ಎಂದು ಆಗ್ರಹ ಮಾಡಿದ್ದಾರೆ.
On Monday, Rahul Gandhi, the Leader of Opposition (LoP) in the Lok Sabha, addressed the House for the first time since assuming the position. He slammed the BJP-led NDA government on various fronts, including the portrayal of Hinduism, during which he displayed a picture of Lord Shiva to convey his message.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm