ಬ್ರೇಕಿಂಗ್ ನ್ಯೂಸ್
04-07-24 12:05 pm HK News Desk ದೇಶ - ವಿದೇಶ
ಕೋಯಿಕ್ಕೋಡ್, ಜುಲೈ 04: ವಿಶೇಷ ಚೇತನ ಬಾಲಕನ ಸಾವಿನ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ ವ್ಯಕ್ತಿಯ ಶಿಕ್ಷೆಯನ್ನು ಹಿಂಪಡೆಯಲಾಗಿದೆ. 2006ರಲ್ಲಿ ಅಬ್ದುಲ್ ರಹೀಮ್ (44) ಎಂಬಾತ ಗಲ್ಲುಶಿಕ್ಷೆಗೆ ಗುರಿಯಾಗಿದ್ದ.
ಇದೀಗ ಈ ಶಿಕ್ಷೆಯನ್ನು ತಪ್ಪಿಸಲು ಆತನ ಕುಟುಂಬಸ್ಥರು ಬರೋಬ್ಬರಿ 34 ಕೋಟಿ ದೇಣಿಗೆ ಸಂಗ್ರಹಿಸಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಿದ ಬೆನ್ನಲ್ಲೇ ಸೌದಿ ಕ್ರಿಮಿನಲ್ ಕೋರ್ಟ್ ಮರಣದಂಡನೆ ಶಿಕ್ಷೆಯನ್ನು ಹಿಂಪಡೆದಿದೆ.
ಅಬ್ದುಲ್ ರಹೀಮ್ನನ್ನು ಕಾಪಾಡಲು ಕೇರಳದಲ್ಲಿ ಆತನ ಕುಟುಂಬಸ್ಥರು 34ಕೋಟಿ ರೂ. ಸಂಗ್ರಹಿಸಿದ್ದರು. ಇದಾದ ಬಳಿಕ ಅಷ್ಟು ಮೊತ್ತದ ಹಣವನ್ನು ಪಡೆದು ರಹೀಮ್ನ ಕುಟುಂಬಸ್ಥರು ಸೌದಿ ಅರೇಬಿಯಾಗೆ ಭೇಟಿ ಕೊಟ್ಟಿದ್ದಾರೆ. ಅಲ್ಲಿ ಕೋರ್ಟ್ ವಿಚಾರಣೆ ವೇಳೆ ಅಷ್ಟು ಮೊತ್ತದ ಹಣವನ್ನು ಪರಿಹಾರವಾಗಿ ಸಂತ್ರಸ್ತ ಸೌದಿ ಕುಟುಂಬಕ್ಕೆ ಹಸ್ತಾಂತರಿಸಿದೆ. ಹಣ ವರ್ಗಾವಣೆ ಆಗುತ್ತಿದ್ದಂತೆ ತಕ್ಷಣ ರಹೀಂನನ್ನು ರೀಲೀಸ್ ಮಾಡಿ ಕೇರಳಕ್ಕೆ ವಾಪಾಸ್ ಕಳಿಸುವಂತೆ ಕೋರ್ಟ್ ಆದೇಶಿಸಿದೆ.
ಇನ್ನು ಈ ಬಗ್ಗೆ ರಹೀಮ್ನ ತಾಯಿ ಫಾತಿಮಾ ಪ್ರತಿಕ್ರಿಯಿಸಿದ್ದು, ತನ್ನ ಮಗನ ಬಿಡುಗಡೆಗೆ ಸಹಕರಿಸಿದ ಎಲ್ಲಾ ಕೇರಳದ ಜನರಿಗೆ ಧನ್ಯವಾದ. ಮಗನ ಬರುವಿಕೆಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಕೋಯಿಕ್ಕೋಡ್ ಜಿಲ್ಲೆಯ ಫೆರೋಕ್ ನಿವಾಸಿಯಾಗಿರುವ ರಹೀಮ್ ಅಟೋ ರಿಕ್ಷಾ ಚಾಲಕನಾಗಿದ್ದ. 2006ರಲ್ಲಿ ಆತನಿಗೆ ಸೌದಿ ಅರೇಬಿಯಾದಲ್ಲಿ ಡ್ರೈವರ್ ನೌಕರಿ ಸಿಕ್ಕಿತ್ತು. 15 ವರ್ಷ ವಿಶೇಷ ಚೇತನ ಬಾಲಕ ಫಾಯಿಜ್ ಅಬ್ದುಲ್ಲಾ ರಹೀಮಾನ್ ಅಲ್ಸಾಹರಿಯ ಓಡಾಟಕ್ಕೆ ನಿಗದಿಯಾಗಿದ್ದ ಕಾರಿನಲ್ಲಿ ಚಾಲಕನಾಗಿ ರಹೀಮ್ ನೇಮಕಗೊಂಡಿದ್ದ. 2006ರಲ್ಲಿ ರಹೀಮ್ ಮತ್ತು ಆ ಬಾಲಕ ಕಾರಿನಲ್ಲಿ ಹೋಗುತ್ತಿದ್ದಾಗ ಆಕಸ್ಮಿಕವಾಗಿ ರಹೀಮ್ನ ಕೈ ತಗುಲಿ ಅನ್ನ ಸೇವನೆಗೆ ಅಳವಡಿಸಿದ್ದ ಪೈಪ್ ಕಳಚಿಬಿದ್ದಿತ್ತು. ತಕ್ಷಣ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದು, ಕಾರಿನಲ್ಲೇ ಮೃತಪಟ್ಟಿದ್ದ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಹೀಮ್ಗೆ ಕ್ರಿಮಿನಲ್ ಕೋರ್ಟ್ 2018ರಲ್ಲಿ ಮರಣದಂಡನೆ ವಿಧಿಸಿತ್ತು. ನಾಲ್ಕು ವರ್ಷಗಳ ನಂತರ ಸುಪ್ರೀಂ ಕೋರ್ಟ್ ದೃಢಪಡಿಸಿತು. ಇದರ ನಂತರ, ಪೀಪಲ್ ಆಕ್ಷನ್ ಕಮಿಟಿ (ಪಿಎಸಿ) ಮರಣದಂಡನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತು ಮತ್ತು ಮೃತ ಕುಟುಂಬವು 34 ಕೋಟಿ ರೂಪಾಯಿಗಳ ಪರಿಹಾರ ಸ್ವೀಕರಿಸಲು ಒಪ್ಪಂದಕ್ಕೆ ಬಂದಿತು. ಅಕ್ಟೋಬರ್ 16, 2023 ರಂದು ಒಪ್ಪಂದಕ್ಕೆ ಸಹಿ ಹಾಕಲಾಯಿತು ಮತ್ತು ಅದನ್ನು ಆರು ತಿಂಗಳೊಳಗೆ ಪಾವತಿಸುವಂತೆ ಆದೇಶಿಸಿತ್ತು.
The death penalty of Kozhikode native Abdul Rahim who is currently jailed in Saudi Arabia has been officially scrapped. The order was issued by a criminal court in Riyadh. Earlier, a ‘Blood Money’ of Rs 34 crores was handed over to the family of the boy who was allegedly killed by Rahim.
09-06-25 12:35 pm
Bangalore Correspondent
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm