ಬ್ರೇಕಿಂಗ್ ನ್ಯೂಸ್
07-07-24 01:16 pm HK News Desk ದೇಶ - ವಿದೇಶ
ಸೂರತ್, ಜುಲೈ.07: ಗುಜರಾತ್ ನ ಸೂರತ್ ನಲ್ಲಿ ಭೀಕರ ಕಟ್ಟಡ ಕುಸಿತ ಉಂಟಾಗಿದ್ದು, ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ.
ಸೂರತ್ ನಲ್ಲಿ ಸಚಿನ್ ಪಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು 6 ಅಂತಸ್ತಿನ ಅಪಾರ್ಟ್ ಮೆಂಟ್ ಕುಸಿದಿದೆ. ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು ರಾತ್ರಿ ಕಟ್ಟಡದಲ್ಲಿ ಮಲಗಿದ್ದ ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಎಸ್ ಡಿ ಆರ್ ಎಫ್ ತಂಡ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಈ ವರೆಗೂ 7 ಮೃತ ದೇಹಗಳನ್ನು ಹೊರ ತಂದಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನೂ 6 ರಿಂದ 7 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಂತೆಯೇ 15 ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.



2017 ರಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್ ಮೆಂಟ್ ನಲ್ಲಿ ಐದು ಐದು ಕುಟುಂಬಗಳು ವಾಸಿಸುತ್ತಿದ್ದವು. ಪೊಲೀಸರ ಪ್ರಕಾರ, ಕುಸಿತ ಸಂಭವಿಸಿದಾಗ ಹಲವಾರು ನಿವಾಸಿಗಳು ಕೆಲಸದಲ್ಲಿದ್ದರು. ಆದರೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಒಳಗೆ ಮಲಗಿದ್ದರು. ಕಟ್ಟಡವು ಕೇವಲ 8 ವರ್ಷಗಳಷ್ಟು ಹಳೆಯದಾಗಿದ್ದರೂ, ಹೆಚ್ಚಿನ ಫ್ಲ್ಯಾಟ್ಗಳು ಖಾಲಿ ಮತ್ತು ಶಿಥಿಲಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಸುಮಾರು ಐದು ಫ್ಲಾಟ್ಗಳಲ್ಲಿ ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ವಾಸಿಸುತ್ತಿದ್ದರು ಎನ್ನಲಾಗಿದೆ. ಅವಶೇಷಗಳ ಒಳಗಿನಿಂದ ಅವರ ಧ್ವನಿ ನಮಗೆ ಕೇಳಿಸುತ್ತದೆ, ಶೀಘ್ರದಲ್ಲೇ ಅವರನ್ನು ರಕ್ಷಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಟ್ಟೆ ಕಾರ್ಖಾನೆಯಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ಬಾಡಿಗೆಗೆ ನೆಲೆಸಿದ್ದರು. ಕಳೆದ ಕೆಲವು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟ್ಟಡ ಕುಸಿದಿದೆ. ಕಳಪೆ ಗುಣಮಟ್ಟದ ನಿರ್ಮಾಣ ಈ ದುರ್ಘಟನೆಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Amid incessant rains, tragedy struck Surat as a six-storey building collapsed in Sachin Pali village. By Sunday, officials confirmed that seven bodies had been pulled from the rubble. The building, which housed 30 apartments, was illegally constructed and mostly vacant, with only five flats occupied. Residents paid ₹1,200 per month in rent.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm