ಬ್ರೇಕಿಂಗ್ ನ್ಯೂಸ್
12-07-24 03:49 pm HK News Desk ದೇಶ - ವಿದೇಶ
ಕಾಠ್ಮಂಡು, ಜುಲೈ 12: ಪರ್ವತಗಳ ನಡುವಿನ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಎರಡು ಪ್ಯಾಸೆಂಜರ್ ಬಸ್ಸುಗಳು ನದಿಗೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ಸುಮಾರು 60 ಮಂದಿ ಕೊಚ್ಚಿ ಹೋಗಿರುವ ಘಟನೆ ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ 120 ಕಿಮೀ ದೂರದ ಸಿಮಲ್ಟಾಲ್ ಎಂಬಲ್ಲಿ ನಡೆದಿದೆ.
ದಕ್ಷಿಣ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ತ್ರಿಶೂಲಿ ನದಿ ಪರ್ವತಗಳ ಎಡೆಯಿಂದ ಧುಮ್ಮಿಕ್ಕಿ ಹರಿಯುವ ಜಾಗದಲ್ಲೇ ಭೂಕುಸಿತ ಸಂಭವಿಸಿದೆ. ಶುಕ್ರವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಠಾತ್ ಭೂಕುಸಿತ ಆಗಿದ್ದು, ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ಸುಗಳು ನದಿಗೆ ಉರುಳಿ ಬಿದ್ದಿದೆ. ಕಾಠ್ಮಂಡುವಿನ ಏಂಜೆಲ್ ಬಸ್ಸಿನಲ್ಲಿ 24 ಮತ್ತು ಇನ್ನೊಂದು ಗಣಪತಿ ಡಿಲಕ್ಸ್ ಬಸ್ಸಿನಲ್ಲಿ 42 ಮಂದಿ ಇದ್ದರು ಎನ್ನಲಾಗಿದೆ. ಆದರೆ ದಾರಿ ಮಧ್ಯೆ ಬಸ್ಸನ್ನೇರಿದವರ ಲೆಕ್ಕ ಇಲ್ಲ. ಹೀಗಾಗಿ ಈ ಸಂಖ್ಯೆ ಹೆಚ್ಚಿರಲೂಬಹುದು. ಈ ಪೈಕಿ ಆರು ಮಂದಿ ಭಾರತೀಯ ಮೂಲದವರಿದ್ದಾರೆ. ಪೊಲೀಸರು, ಸ್ಕೂಬಾ ಡೈವರ್ ಗಳು ಇಳಿಜಾರಿನಲ್ಲಿ ಹರಿಯುವ ನದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಯಾವುದೇ ಮೃತದೇಹ ಪತ್ತೆಯಾಗಿಲ್ಲ ಎಂದು ಚಿತ್ವಾನ್ ಜಿಲ್ಲೆಯ ಜಿಲ್ಲಾಧಿಕಾರಿ ಖಿಮಾನಂದ ಭೂಸಾಲ್ ತಿಳಿಸಿದ್ದಾರೆ.

ಗಣಪತಿ ಡಿಲಕ್ಸ್ ಬಸ್ ಉರುಳಿ ಬೀಳುತ್ತಿದ್ದಾಗಲೇ ಅದರಿಂದ ಮೂವರು ಪ್ರಯಾಣಿಕರು ಹೊರಗೆ ಹಾರಿದ್ದು, ನೀರಿನಲ್ಲಿ ಈಜಿ ದಡ ಸೇರಿದ್ದಾರೆ. ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಿಮಾಲಯ ರಾಜ್ಯ ನೇಪಾಳದಲ್ಲಿ ಜೂನ್ ನಿಂದ ಸೆಪ್ಟಂಬರ್ ವರೆಗೆ ಭಾರೀ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಪರ್ವತ ಮಧ್ಯೆ ಭೂಕುಸಿತ ಸಾಮಾನ್ಯ ಎನ್ನುವಂತಾಗಿದೆ. ತ್ರಿಶೂಲಿ ನದಿಯಿರುವ ಹೆದ್ದಾರಿಯಲ್ಲೇ ಶುಕ್ರವಾರ ಮುಂಜಾನೆ ಮತ್ತೊಂದು ಬಸ್ ಪ್ರವಾಹಕ್ಕೆ ಸಿಲುಕಿದ್ದು, ಅದರಲ್ಲಿ ಚಾಲಕ ಮೃತಪಟ್ಟಿದ್ದಾರೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೇಪಾಳ, ಹಿಮಾಚಲದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಸ್ಸಾಮ್ ನಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ.
A landslide swept two passenger buses carrying more than 50 people into a swollen river in central Nepal early Friday, while continuous rain and more landslides were making rescue efforts difficult.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm