ಬ್ರೇಕಿಂಗ್ ನ್ಯೂಸ್
12-07-24 03:49 pm HK News Desk ದೇಶ - ವಿದೇಶ
ಕಾಠ್ಮಂಡು, ಜುಲೈ 12: ಪರ್ವತಗಳ ನಡುವಿನ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಎರಡು ಪ್ಯಾಸೆಂಜರ್ ಬಸ್ಸುಗಳು ನದಿಗೆ ಉರುಳಿ ಬಿದ್ದಿದ್ದು, ಅದರಲ್ಲಿದ್ದ ಸುಮಾರು 60 ಮಂದಿ ಕೊಚ್ಚಿ ಹೋಗಿರುವ ಘಟನೆ ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ 120 ಕಿಮೀ ದೂರದ ಸಿಮಲ್ಟಾಲ್ ಎಂಬಲ್ಲಿ ನಡೆದಿದೆ.
ದಕ್ಷಿಣ ನೇಪಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ತ್ರಿಶೂಲಿ ನದಿ ಪರ್ವತಗಳ ಎಡೆಯಿಂದ ಧುಮ್ಮಿಕ್ಕಿ ಹರಿಯುವ ಜಾಗದಲ್ಲೇ ಭೂಕುಸಿತ ಸಂಭವಿಸಿದೆ. ಶುಕ್ರವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಠಾತ್ ಭೂಕುಸಿತ ಆಗಿದ್ದು, ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ಸುಗಳು ನದಿಗೆ ಉರುಳಿ ಬಿದ್ದಿದೆ. ಕಾಠ್ಮಂಡುವಿನ ಏಂಜೆಲ್ ಬಸ್ಸಿನಲ್ಲಿ 24 ಮತ್ತು ಇನ್ನೊಂದು ಗಣಪತಿ ಡಿಲಕ್ಸ್ ಬಸ್ಸಿನಲ್ಲಿ 42 ಮಂದಿ ಇದ್ದರು ಎನ್ನಲಾಗಿದೆ. ಆದರೆ ದಾರಿ ಮಧ್ಯೆ ಬಸ್ಸನ್ನೇರಿದವರ ಲೆಕ್ಕ ಇಲ್ಲ. ಹೀಗಾಗಿ ಈ ಸಂಖ್ಯೆ ಹೆಚ್ಚಿರಲೂಬಹುದು. ಈ ಪೈಕಿ ಆರು ಮಂದಿ ಭಾರತೀಯ ಮೂಲದವರಿದ್ದಾರೆ. ಪೊಲೀಸರು, ಸ್ಕೂಬಾ ಡೈವರ್ ಗಳು ಇಳಿಜಾರಿನಲ್ಲಿ ಹರಿಯುವ ನದಿಯಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಯಾವುದೇ ಮೃತದೇಹ ಪತ್ತೆಯಾಗಿಲ್ಲ ಎಂದು ಚಿತ್ವಾನ್ ಜಿಲ್ಲೆಯ ಜಿಲ್ಲಾಧಿಕಾರಿ ಖಿಮಾನಂದ ಭೂಸಾಲ್ ತಿಳಿಸಿದ್ದಾರೆ.

ಗಣಪತಿ ಡಿಲಕ್ಸ್ ಬಸ್ ಉರುಳಿ ಬೀಳುತ್ತಿದ್ದಾಗಲೇ ಅದರಿಂದ ಮೂವರು ಪ್ರಯಾಣಿಕರು ಹೊರಗೆ ಹಾರಿದ್ದು, ನೀರಿನಲ್ಲಿ ಈಜಿ ದಡ ಸೇರಿದ್ದಾರೆ. ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹಿಮಾಲಯ ರಾಜ್ಯ ನೇಪಾಳದಲ್ಲಿ ಜೂನ್ ನಿಂದ ಸೆಪ್ಟಂಬರ್ ವರೆಗೆ ಭಾರೀ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಪರ್ವತ ಮಧ್ಯೆ ಭೂಕುಸಿತ ಸಾಮಾನ್ಯ ಎನ್ನುವಂತಾಗಿದೆ. ತ್ರಿಶೂಲಿ ನದಿಯಿರುವ ಹೆದ್ದಾರಿಯಲ್ಲೇ ಶುಕ್ರವಾರ ಮುಂಜಾನೆ ಮತ್ತೊಂದು ಬಸ್ ಪ್ರವಾಹಕ್ಕೆ ಸಿಲುಕಿದ್ದು, ಅದರಲ್ಲಿ ಚಾಲಕ ಮೃತಪಟ್ಟಿದ್ದಾರೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನೇಪಾಳ, ಹಿಮಾಚಲದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಸ್ಸಾಮ್ ನಲ್ಲಿ ಪ್ರವಾಹ ಸ್ಥಿತಿ ತಲೆದೋರಿದೆ.
A landslide swept two passenger buses carrying more than 50 people into a swollen river in central Nepal early Friday, while continuous rain and more landslides were making rescue efforts difficult.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm