ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm