ಬ್ರೇಕಿಂಗ್ ನ್ಯೂಸ್
15-07-24 11:01 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮುಸ್ಲಿಂ ವಿಚ್ಛೇದಿತ ಮಹಿಳೆಯರಿಗೆ ಜೀವನಾಂಶ ಕೇಳುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅಭಿಪ್ರಾಯಪಟ್ಟಿದೆ. ಅಲ್ಲದೆ, ಸುಪ್ರೀಂ ತೀರ್ಪನ್ನು ರದ್ದುಗೊಳಿಸಲು ಅಗತ್ಯವಿರುವ ಎಲ್ಲ ಮಾರ್ಗಗಳನ್ನು ಕಂಡುಕೊಳ್ಳಲು ನಿರ್ಧರಿಸಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತಾಗಿ ಕಾನೂನು ಮಂಡಳಿಯ ಸದಸ್ಯರು ಸಭೆ ನಡೆಸಿದ್ದು, ವಿಚ್ಛೇದಿತ ಮಹಿಳೆಯರು ಜೀವನಾಂಶಕ್ಕೆ ಅರ್ಹರು ಎಂದಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ನಿರ್ಣಯ ಅಂಗೀಕರಿಸಲಾಯಿತು.
ಮದುವೆಗಳ ಸಂರಕ್ಷಣೆಗೆ ಕ್ರಮ
ಸಭೆಯ ನಿರ್ಣಯಗಳ ಬಗ್ಗೆ ಪ್ರಕಟಣೆ ನೀಡಿರುವ ಮಂಡಳಿ, ಮುಸ್ಲಿಂ ಕಾನೂನು ಮಂಡಳಿ ಪ್ರವಾದಿ ಮಹಮ್ಮದರ ನಿಯಮಗಳನ್ನು ಪಾಲಿಸಲಿದೆ. ಅಲ್ಲಾಹನ ದೃಷ್ಟಿಯಲ್ಲಿ ನಿಷೇಧಿತವಾಗಿರುವ ವಿಚ್ಛೇದನ ಪದ್ಧತಿ ತೊಡೆದು ಹಾಕಲು ಮಂಡಳಿ ಕೆಲಸ ಮಾಡಲಿದೆ. ಕುರಾನ್ ನಲ್ಲಿ ಉಲ್ಲೇಖಿಸಿದಂತೆ ಮದುವೆಗಳನ್ನು ಸಂರಕ್ಷಿಸಲು ಬೇಕಿರುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.
ಆದಾಗ್ಯೂ ವೈವಾಹಿಕ ಜೀವನ ಕಷ್ಟ ಎಂದೆನಿಸಿದಾಗ ನೆಮ್ಮದಿಯ ಬದುಕಿಗೆ ವಿಚ್ಛೇದನ ನೀಡುವುದು ದಂಪತಿಯ ವೈಯಕ್ತಿಕ ನಿರ್ಧಾರವಾಗಲಿದೆ. ಇಂಥ ನಿರ್ಣಯಗಳನ್ನು ಮಂಡಳಿ ಬೆಂಬಲಿಸಲಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಪ್ರಜಾಸತ್ತಾತ್ಮಕ ಹಾಗೂ ಸಾಂವಿಧಾನಿಕ ಮಾರ್ಗದಲ್ಲಿ ಕಾನೂನು ಹೋರಾಟ ನಡೆಸಲಾಗುವುದು. ಇಸ್ಲಾಮಿಕ್ ಕಾನೂನು ರಕ್ಷಿಸಿಕೊಳ್ಳಲು ತೀರ್ಪು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಗುವುದು ಎಂದು ಮಂಡಳಿ ವಕ್ತಾರ ಎಸ್.ಕ್ಯೂ.ಆರ್. ಇಲ್ಯಾಸ್ ಹೇಳಿದ್ದಾರೆ.
ಇದೇ ವೇಳೆ ಉತ್ತರಾಖಂಡ ಸರಕಾರ ಜಾರಿಗೊಳಿಸಿರುವ ಏಕರೂಪ ನಾಗರಿಕ ಸಂಹಿತೆ ಪ್ರಶ್ನಿಸಿ ಹೈಕೋರ್ಟಿನಲ್ಲಿ ಕಾನೂನು ಹೋರಾಟ ನಡೆಸಲು ಮುಸ್ಲಿಂ ಮಂಡಳಿ ನಿರ್ಧರಿಸಿದೆ. ದೇಶದಲ್ಲಿ ಮುಸ್ಲಿಮರ ಕಲ್ಯಾಣಕ್ಕೆ ನೀಡಲಾಗಿರುವ ವಕ್ಫ್ ಆಸ್ತಿಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ನಿರ್ಧರಿಸಿರುವ ಮಂಡಳಿ, ವಕ್ಫ್ ಕಾನೂನುಗಳನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಾಡಬಾರದು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಜೊತೆಗೆ, 1991ರ ಆರಾಧನಾ ಕಾಯಿದೆಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಲಾಗಿದೆ.
The All India Muslim Personal Law Board (AIMPLB) on July 14 asserted that the Supreme Court verdict on maintenance to Muslim women was against Islamic law and authorised its president to explore all possible measures to ensure that this decision is overturned. The board also decided to challenge in the Uttarakhand High Court the Uniform Civil Code brought in the State.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm