ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm