ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm