ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm