ಬ್ರೇಕಿಂಗ್ ನ್ಯೂಸ್
27-07-24 10:50 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 27 : ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನ ಆರಂಭದಲ್ಲಿ ಭಾರತೀಯರಿಗೆ ನಿರಾಸೆ ಉಂಟಾಗಿದ್ದು ಬಳಿಕ ಹೊಸ ಭರವಸೆ ಮೂಡಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಫೈನಲ್ ಪ್ರವೇಶಿಸಲು ವಿಫಲರಾಗಿದ್ದ ಮನು ಬಾಕರ್ ಈ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು, ಮೊದಲ ಸೀರಿಸ್ನಲ್ಲಿ 100ಕ್ಕೆ 97 ಅಂಕ ಕಲೆಹಾಕಿದರು. ಎರಡನೇ ಸೀರಿಸ್ನಲ್ಲಿ 97 ಅಂಕ ಸಂಪಾದಿಸಿ, ಮೊದಲಾರ್ಧ ಮುಗಿಯುವ ವೇಳೆಗೆ 300ಕ್ಕೆ 292 ಅಂಕ ಪಡೆದಿದ್ದರು. ಇದೇ ಪ್ರದರ್ಶನ ಮಟ್ಟ ಕಾಯ್ದುಕೊಂಡು ಅಂತಿಮವಾಗಿ 580 ಅಂಕ ಪಡೆದು ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದರು. ಪದಕ ನಿರ್ಣಯ ಸ್ಪರ್ಧೆ ಜುಲೈ 28ರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.




10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಶೂಟರ್ಗಳು ಹಿನ್ನಡೆ ಅನುಭವಿಸಿದರು. ರಮಿತಾ ಮತ್ತು ಅರ್ಜುನ್ ಬಬುಟಾ ಜೋಡಿ 628.7 ಅಂಕಗಳೊಂದಿಗೆ ಕೇವಲ ಒಂದು ಅಂಕದಿಂದ ಫೈನಲ್ ಪ್ರವೇಶ ಪಡೆಯಲು ವಿಫಲರಾದರು. ಇದೇ ವಿಭಾಗದಲ್ಲಿ ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ 626.3 ಅಂಕಗಳೊಂದಿಗೆ 12ನೇ ಸ್ಥಾನ ಪಡೆದರು.
ರೋವಿಂಗ್ ಸ್ಪರ್ಧೆಯ ಪುರುಷರ ಸಿಂಗಲ್ ಸ್ಕಲ್ ಸ್ಪರ್ಧೆಯ ಹೀಟ್ 1ರಲ್ಲಿ ಭಾರತದ ಏಕೈಕ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಫೈನಲ್ ಗೇರಲು ವಿಫಲರಾದರು.
After a disappointing start to the opening day of the Olympic Games, the Indians got a new hope. Manu Bhaker, who failed to make it to the final of the Tokyo Olympics due to a pistol error, has qualified for the final this time.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm