ಬ್ರೇಕಿಂಗ್ ನ್ಯೂಸ್
27-07-24 10:50 pm HK News Desk ದೇಶ - ವಿದೇಶ
ಪ್ಯಾರಿಸ್, ಜುಲೈ 27 : ಒಲಿಂಪಿಕ್ಸ್ ಕ್ರೀಡಾಕೂಟದ ಮೊದಲ ದಿನ ಆರಂಭದಲ್ಲಿ ಭಾರತೀಯರಿಗೆ ನಿರಾಸೆ ಉಂಟಾಗಿದ್ದು ಬಳಿಕ ಹೊಸ ಭರವಸೆ ಮೂಡಿದೆ. ಟೋಕಿಯೋ ಒಲಿಂಪಿಕ್ಸ್ನಲ್ಲಿ ಪಿಸ್ತೂಲ್ ದೋಷದಿಂದ ಫೈನಲ್ ಪ್ರವೇಶಿಸಲು ವಿಫಲರಾಗಿದ್ದ ಮನು ಬಾಕರ್ ಈ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮನು, ಮೊದಲ ಸೀರಿಸ್ನಲ್ಲಿ 100ಕ್ಕೆ 97 ಅಂಕ ಕಲೆಹಾಕಿದರು. ಎರಡನೇ ಸೀರಿಸ್ನಲ್ಲಿ 97 ಅಂಕ ಸಂಪಾದಿಸಿ, ಮೊದಲಾರ್ಧ ಮುಗಿಯುವ ವೇಳೆಗೆ 300ಕ್ಕೆ 292 ಅಂಕ ಪಡೆದಿದ್ದರು. ಇದೇ ಪ್ರದರ್ಶನ ಮಟ್ಟ ಕಾಯ್ದುಕೊಂಡು ಅಂತಿಮವಾಗಿ 580 ಅಂಕ ಪಡೆದು ಅರ್ಹತಾ ಸುತ್ತಿನಲ್ಲಿ ಮೂರನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಿದರು. ಪದಕ ನಿರ್ಣಯ ಸ್ಪರ್ಧೆ ಜುಲೈ 28ರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.




10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತದ ಶೂಟರ್ಗಳು ಹಿನ್ನಡೆ ಅನುಭವಿಸಿದರು. ರಮಿತಾ ಮತ್ತು ಅರ್ಜುನ್ ಬಬುಟಾ ಜೋಡಿ 628.7 ಅಂಕಗಳೊಂದಿಗೆ ಕೇವಲ ಒಂದು ಅಂಕದಿಂದ ಫೈನಲ್ ಪ್ರವೇಶ ಪಡೆಯಲು ವಿಫಲರಾದರು. ಇದೇ ವಿಭಾಗದಲ್ಲಿ ಎಲವೆನಿಲ್ ವಲರಿವನ್ ಮತ್ತು ಸಂದೀಪ್ ಸಿಂಗ್ 626.3 ಅಂಕಗಳೊಂದಿಗೆ 12ನೇ ಸ್ಥಾನ ಪಡೆದರು.
ರೋವಿಂಗ್ ಸ್ಪರ್ಧೆಯ ಪುರುಷರ ಸಿಂಗಲ್ ಸ್ಕಲ್ ಸ್ಪರ್ಧೆಯ ಹೀಟ್ 1ರಲ್ಲಿ ಭಾರತದ ಏಕೈಕ ರೋವರ್ ಬಲರಾಜ್ ಪನ್ವಾರ್ ನಾಲ್ಕನೇ ಸ್ಥಾನ ಗಳಿಸಿದರು. ಇದರಿಂದ ಫೈನಲ್ ಗೇರಲು ವಿಫಲರಾದರು.
After a disappointing start to the opening day of the Olympic Games, the Indians got a new hope. Manu Bhaker, who failed to make it to the final of the Tokyo Olympics due to a pistol error, has qualified for the final this time.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm