ಬ್ರೇಕಿಂಗ್ ನ್ಯೂಸ್
08-12-20 11:55 am Headline Karnataka News Network ದೇಶ - ವಿದೇಶ
ಚೆನ್ನೈ, ಡಿ.7: ಶೌಚಕ್ಕೆಂದು ಹೊರಗಡೆ ಹೋದ ಸರ್ಕಾರಿ ಮಹಿಳಾ ಉದ್ಯೋಗಿಯೊಬ್ಬರು ದುರಂತವಾಗಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮೃತರನ್ನು ಶರಣ್ಯ(24) ಎಂದು ಗುರುತಿಸಲಾಗಿದೆ. ಈಕೆ ಕಾಂಚೀಪುರಂ ಕೃಷಿ ಅಭಿವೃದ್ಧಿ ಇಲಾಖೆಯ ಗೋದಾಮಿನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶರಣ್ಯ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಯಲ್ಲಿ ಮಹಿಳೆಯರಿಗೆಂದು ಪ್ರತ್ಯೇಕ ಶೌಚಾಲಯ ಇಲ್ಲದಿರುವುದೇ ಈ ದುರಂತಕ್ಕೆ ಕಾರಣವಾಗಿದೆ.
ಆಫೀಸಿನಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಮಹಿಳೆಯರು ಪಕ್ಕದ ಕಟ್ಟಡ ಅಥವಾ ಮನೆಗಳಿಗೆ ಹೋಗುತ್ತಿದ್ದರು. ಅಂತೆಯೇ ಶರಣ್ಯ ಅವರು ಶನಿವಾರ ಶೌಚಕ್ಕೆಂದು ಹೊರಗಡೆ ಹೋದವರು ಮತ್ತೆ ವಾಪಸ್ ಬರಲೇ ಇಲ್ಲ. ಹೊರಗಡೆ ಹೋದ ಶರಣ್ಯ ಆಫೀಸಿಗೆ ಬರದಿರುವುದರಿಂದ ಸಹೋದ್ಯೋಗಿಗಳು ಆಕೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಆಕೆ ನಿರ್ಮಾಣ ಹಂತದ ಮನೆಯೊಂದರ ತೆರೆದ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದು ಮೃತಪಟ್ಟಿದ್ದರು. ಈ ವಿಚಾರ ಶರಣ್ಯ ಕುಟುಂಬಕ್ಕೆ ಗೊತ್ತಾಗುತ್ತಿದ್ದಂತೆಯೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.
ಇಡೀ ಕುಟುಂಬವನ್ನು ಶರಣ್ಯ ನಿಭಾಯಿಸುತ್ತಿದ್ದರು. ಹೀಗಾಗಿ ತಂದೆ ಪಾಡು ಹೇಳತೀರದಾಗಿತ್ತು. ಶರಣ್ಯ ನನ್ನ ಜೀವ, ಆಕೆಯ ಸಾವನ್ನು ನನ್ನಿಂದ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ನನ್ನ ಮಗಳು ಐಎಎಸ್ ಕನಸು ಕಂಡಿದ್ದಳು. ಕೆಲಸ ಮಾಡುತ್ತಲೇ ಐಎಎಸ್ ಗೆ ತಯಾರಾಗಲು ನಿರ್ಧರಿಸಿದ್ದಳು. ಆಕೆಯ ಕನಸು ಸಾವಿನೊಂದಿಗೆ ಕೊನೆಯಾಯಿತು ಎಂದು ಶರಣ್ಯ ತಂದೆ ಷಣ್ಮುಗಂ ಕಣ್ಣೀರು ಹಾಕಿದ್ದಾರೆ.
ಶರಣ್ಯ ಟಿಎಸ್ಪಿಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ಸೇರಿಕೊಂಡಿದ್ದಳು. ಆಕೆ ಈ ಹಿಂದೆ ಒಂದು ಬಾರಿ ಕೆಲಸ ಬಿಡುವ ನಿರ್ಧಾರ ಕೂಡ ಮಾಡಿದ್ದಳು. ಪ್ರತಿ ದಿನ ಆಕೆ ತನ್ನ ಸಹೋದ್ಯೋಗಿಗಳ ಜೊತೆಯೇ ಶೌಚಕ್ಕೆ ಹೋಗುತ್ತಿದ್ದಳು. ಆದರೆ ಈ ಬಾರಿ ಯಾಕೆ ಹೀಗಾಯ್ತು ಅಂತ ಗೊತ್ತಾಗುತ್ತಿಲ್ಲ ಎಂದು ತಂದೆ ಕಣ್ಣೀರು ಹಾಕಿದರು.
A 24-year-old Tamil Nadu government employee on Saturday died after she slipped and fell into an unclosed septic tank in an under-construction house where she had gone to relieve herself.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm