ಬ್ರೇಕಿಂಗ್ ನ್ಯೂಸ್
07-08-20 03:31 pm Headline Karnataka News Network ದೇಶ - ವಿದೇಶ
ಕ್ಯಾಲಿಕಟ್ ಆಗಸ್ಟ್ 07: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾಗಿದೆ. ದುಬೈನಿಂದ ಕ್ಯಾಲಿಕಟ್ ಆಗಮಿಸಿದ ಎರ್ ಇಂಡಿಯಾ ವಿಮಾನ ಲ್ಯಾಂಡ್ ಆಗುವ ಹಂತದಲ್ಲಿ ರನ್ ವೇಯಿಂದ ಜಾರಿದ್ದು ದುರಂತಕ್ಕೀಡಾಗಿದೆ.
ಈ ಅವಘಡದಲ್ಲಿ ಎರಡು ಪೈಲೆಟ್ ಸೇರಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 112ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಮಾನದಲ್ಲಿ ಸುಮಾರು 191 ಮಂದಿ ಪ್ರಯಾಣಿಕರಿದ್ದರು ಎಂದು ಡಿಜಿಸಿಎ ಹೇಳಿದೆ. ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ವಿಮಾನ ನಿಲ್ದಾಣದ ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ ವೇಯಿಂದ ಜಾರಿ ನಿಯಂತ್ರಣ ತಪ್ಪಿ ಹೊರಗೆ ಬಿದ್ದಿದೆ.
ಸಂಜೆ 7.45 ರ ಸುಮಾರಿಗೆ ವಿಮಾನ ಲ್ಯಾಂಡ್ ಆಗುತ್ತಿದ್ದಾಗ ಘಟನೆ ನಡೆದಿದೆ. ಮಳೆಯ ಕಾರಣ ರನ್ ವೇಯಿಂದ ಹೊರಕ್ಕೆ ಜಾರಿದ್ದು ಅಲ್ಲಿಯೇ ಪಕ್ಕದಲ್ಲಿರುವ ಪ್ರಪಾತಕ್ಕೆ ಬಿದ್ದಿದೆ. ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಮಳೆಯಿಂದಾಗಿ ದುರ್ಘಟನೆ ವೇಳೆ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿಲ್ಲ.
ಸ್ಥಳದಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು ಇದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅಲ್ಲದೆ, ಎನ್ಡಿಆರ್ಎಫ್ ತಂಡದ 50 ಸೈನಿಕರು ರಕ್ಷಣಾ ಸ್ಥಳಕ್ಕೆ ಧಾವಿಸಿದ್ಧಾರೆ.
ವಿಮಾನದಲ್ಲಿ ಕರ್ನಾಟಕದ ಕರಾವಳಿಯ ಮಂದಿಯೂ ಇದ್ದರು ಎನ್ನಲಾಗ್ತಿದೆ. ಲಾಕ್ ಡೌನ್ ಬಳಿಕ ವಿಶೇಷ ವಿಮಾನದಲ್ಲಿ ಸಿಕ್ಕಿಬಿದ್ದ ಪ್ರಯಾಣಿಕರು ಹಿಂತಿರುಗುತ್ತಿದ್ದರು..
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
18-08-26 02:42 pm
HK News Staffer
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿಗೆ ಹೊಸ ಟೀಮ್ ;...
17-08-26 09:45 pm
ಪ್ರಧಾನಿ ‘ದಿಮಾಗಿ ನಕ್ಸಲರು’ ಹೇಳಿಕೆಗೆ ರಿಜಿಜು ಅರ್ಥ...
17-08-26 05:38 pm
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
18-08-26 10:06 pm
HK News Staffer
ಮೊಬೈಲ್ ಗೀಳು ಬೇಡ ಎಂದಿದ್ದ ಅಜ್ಜನನ್ನೇ ಕೊಲ್ಲಿಸಿದ 1...
18-08-26 06:02 pm
ಚಿಕ್ಕಬಾಣಾವರ ತಂದೆ, ಮಗು ಸಾವಿಗೆ ರೋಚಕ ಟ್ವಿಸ್ಟ್ ;...
18-08-26 03:00 pm
ಬೆಳಗಾವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸ ; ವೃದ್ಧನ ಮೇಲ...
17-08-26 10:04 pm
ದಾಂಡೇಲಿ ವೈಲ್ಡರ್ ನೆಸ್ಟ್ ರೆಸಾರ್ಟ್ಗೆ ನುಗ್ಗಿದ ಬ್...
17-08-26 10:02 pm