ಬ್ರೇಕಿಂಗ್ ನ್ಯೂಸ್
30-07-24 02:25 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.30: ಮುಂಬೈ ಮೂಲದ 16 ವರ್ಷದ ಈಜುಪಟು ಜಿಯಾ ರೈ ಇಂಗ್ಲೆಂಡ್ ಮತ್ತು ಫ್ರಾನ್ಸ್ ಮಧ್ಯೆ ಇರುವ 34 ಕಿಮೀ ಉದ್ದದ ಕಡಲ್ಗಾಲುವೆಯನ್ನು ಅತಿ ವೇಗದಲ್ಲಿ ಈಜಿ ದಡ ಸೇರುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ. ಜುಲೈ 28-29ರಂದು 17 ಗಂಟೆ 25 ನಿಮಿಷಗಳಲ್ಲಿ ಜಿಯಾ ಈ ಸಾಧನೆ ಮಾಡಿದ್ದು, ಕಡಲ್ಗಾಲುವೆ ದಾಟಿದ ಅತಿ ವೇಗದ ಮತ್ತು ಅತಿ ಕಿರಿಯ ಪ್ಯಾರಾ ಸ್ವಿಮ್ಮರ್ ಎಂಬ ದಾಖಲೆ ಸೇರಿದ್ದಾರೆ.
ಆಟಿಸಮ್ ಎನ್ನುವ ನರಸಂಬಂಧೀ ಕಾಯಿಲೆ ಎದುರಿಸುತ್ತಿರುವ ಜಿಯಾ ರೈ ಮುಂಬೈನಲ್ಲಿ ನೌಕಾಪಡೆ ಉದ್ಯೋಗಿಯಾಗಿರುವ ಮದನ್ ರೈ ಅವರ ಪುತ್ರಿ. ಅತಿ ಕಿರಿಯ ವಯಸ್ಸಿನಲ್ಲೇ ವಿಶ್ವ ದಾಖಲೆ ಮಾಡಿರುವ ಜಿಯಾ ಅವರನ್ನು ಪಶ್ಚಿಮ ನೌಕಾಪಡೆಯ ಕಮಾಂಡ್ ವತಿಯಿಂದ ಅಭಿನಂದಿಸಿ ಟ್ವಿಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ.

![]()


ಈ ಹಿಂದೆ ಭಾರತ ಮತ್ತು ಶ್ರೀಲಂಕಾ ಮಧ್ಯೆ ಇರುವ ಪಾಕ್ ಸ್ಟ್ರೈಟ್ (ರಾಮಸೇತು ಇರುವ ಪ್ರದೇಶ) ಕಡಲ್ಗಾಲುವೆಯನ್ನು 13 ಗಂಟೆ 10 ನಿಮಿಷಗಳಲ್ಲಿ ಈಜುವ ಮೂಲಕ ಜಿಯಾ ರೈ ವಿಶ್ವ ದಾಖಲೆ ಮಾಡಿದ್ದರು. 2022ರ ಮಾರ್ಚ್ 20ರಂದು ಶ್ರೀಲಂಕಾದ ತಲೈಮನ್ನಾರ್ ದ್ವೀಪದಿಂದ ರಾಮೇಶ್ವರ ಬಳಿಯಿರುವ ಧನುಷ್ಕೋಡಿಗೆ 29 ಕಿಮೀ ಉದ್ದದ ಜಲಸಂಧಿಯನ್ನು ಕೇವಲ 13 ಗಂಟೆಗಳಲ್ಲಿ ಈಜಿದ್ದು, ಈ ಸಾಧನೆ ಮಾಡಿದ ಅತಿ ಕಿರಿಯ ಕ್ರೀಡಾಪಟು ಎಂಬ ಸಾಧನೆ ಮಾಡಿದ್ದಾರೆ.
2022ರ ಡಿಸೆಂಬರ್ ನಲ್ಲಿ ಮುಂಬೈನಿಂದ ಗೋವಾದ ವಸಾಯಿ ಬಂದರಿನ ವರೆಗೆ 1100 ಕಿಮೀ ದೂರವನ್ನು ಆರು ತಂಡದ ಸದಸ್ಯರ ಜೊತೆ ಸೇರಿ ಈಜಿದ ಸಾಧನೆಯನ್ನೂ ಜಿಯಾ ರೈ ಹೊಂದಿದ್ದಾರೆ. ಆರು ಮಂದಿಯ ತಂಡದ ಸದಸ್ಯರು ರಿಲೇ ಮೂಲಕ 11 ದಿನ, 22 ಗಂಟೆ, 13 ನಿಮಿಷಗಳಲ್ಲಿ 1100 ಕಿಮೀ ದೂರವನ್ನು ಕ್ರಮಿಸಿದ್ದಾರೆ. ಆರು ಮಂದಿಯಲ್ಲಿ ಜಿಯಾ ರೈ ಮಾತ್ರ ಅತಿ ಕಿರಿಯ ಮತ್ತು ಏಕೈಕ ಹುಡುಗಿಯಾಗಿದ್ದರು.
ಜಿಯಾ ರೈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಒಮ್ಮೆ ಮನ್ ಕಿ ಬಾತ್ ಸರಣಿಯಲ್ಲಿ ಉಲ್ಲೇಖಿಸಿದ್ದರು. 2021ರಲ್ಲಿ ಮನ್ ಕಿ ಭಾಷಣದ ಸಂದರ್ಭದಲ್ಲಿ ಜಿಯಾ ರೈ ಮಾಡಿರುವ ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ಬಗ್ಗೆ ಹೇಳಿದ್ದರು. ರಾಜ್ಯ, ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗಳಲ್ಲಿಯೂ ಜಿಯಾ ರೈ ಸಾಧನೆ ಮಾಡಿದ್ದಾರೆ.
Jiya Rai, a 16-year-old Mumbai resident diagnosed with Autism Spectrum Disorder, has achieved a remarkable milestone by becoming the youngest and fastest para swimmer to cross the English Channel. She completed this incredible feat between July 28 and 29.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm