ಬ್ರೇಕಿಂಗ್ ನ್ಯೂಸ್
01-08-24 07:57 pm HK News Desk ದೇಶ - ವಿದೇಶ
ವಯನಾಡ್, ಆಗಸ್ಟ್.1: ದೇವರನಾಡು ಕೇರಳದ ವಯನಾಡು ಜಿಲ್ಲೆಯ ನಾಲ್ಕು ಗ್ರಾಮಗಳ ಸ್ಥಿತಿ ಅಕ್ಷರಶಃ ಸ್ಮಶಾನ ಸದೃಶವಾಗಿದೆ. ಎಲ್ಲಿ ನೋಡಿದರೂ ಹೆಣಗಳ ರಾಶಿ, ತಮ್ಮವರನ್ನು ಕಳೆದುಕೊಂಡು ಅನಾಥರಾದವರ ರೋದನ. ಸದ್ಯಕ್ಕೆ ಪತ್ತೆಯಾದ ಶವಗಳ ಸಂಖ್ಯೆ 270 ದಾಟಿದ್ದರೆ, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. 400ಕ್ಕೂ ಹೆಚ್ಚು ಮನೆಗಳಿದ್ದ ಮುಂಡಕೈ ಗ್ರಾಮ ಪೂರ್ತಿ ನೆಲಸಮವಾಗಿದ್ದು, ಅಲ್ಲೀಗ 40ರಷ್ಟು ಮನೆಗಳು ಮಾತ್ರ ಉಳಿದುಕೊಂಡಿವೆ ಎಂದರೆ, ಅಲ್ಲಿನ ಘೋರ ಸ್ಥಿತಿ ಅರ್ಥವಾಗುತ್ತದೆ.
ದುರಂತ ನಡೆದಿರುವ ಗ್ರಾಮಗಳಲ್ಲಿ ಒಬ್ಬೊಬ್ಬರದ್ದು ಒಂದೊಂದು ನೋವಿನ ಕಥೆಯಾಗಿದೆ. ಸತ್ತವರಿಗಿಂತಲೂ ಬದುಕುಳಿದವರ ಸ್ಥಿತಿಯೇ ಘೋರ ಅನ್ನಿಸುವಂತಿದೆ. ತಮ್ಮವರನ್ನೆಲ್ಲ ಕಳಕೊಂಡು ಉಳಿದುಕೊಂಡಿರುವ ಒಂದಿಬ್ಬರು ತಮ್ಮದೆನ್ನುವ ಯಾವುದನ್ನೂ ಉಳಿಸಿಕೊಂಡಿಲ್ಲ. ಉಟ್ಟ ಬಟ್ಟೆಯನ್ನಷ್ಟೇ ಉಳಿಸಿಕೊಂಡಿದ್ದು, ಮನೆ, ಸೊತ್ತು, ಸಂಬಂಧಿಕರನ್ನೆಲ್ಲ ಕಳಕೊಂಡವರು ಗೋಳಿಡುತ್ತಿದ್ದಾರೆ. ಮುಂಡಕೈ ಗ್ರಾಮದ ಜಿಷ್ಣು ರಂಜನ್ ತಮ್ಮವರನ್ನು ಸಾಹಿ ಸಲಹುವುದಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದವರು. ಆದರೆ, ಜಿಷ್ಣುವಿನ ಒಬ್ಬ ಸಣ್ಣ ಸೋದರ ಬಿಟ್ಟರೆ, ತಂದೆ, ತಾಯಿ, ಅಜ್ಜಿ, ಪತ್ನಿ ತನ್ನವರೆಲ್ಲರನ್ನೂ ಕಳಕೊಂಡಿದ್ದಾರೆ.
ಜಿಷ್ಣು ರಂಜನ್ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ. ದುರಂತಕ್ಕೀಡಾದ ಮುಂಡಕೈ ಗ್ರಾಮದ ಪುಂಜಿರಿವಟ್ಟಂ ಎಂಬಲ್ಲಿ ಅವರಿದ್ದ ಮನೆಯೇ ಮಣ್ಣಿನಲ್ಲಿ ಸಮಾಧಿಯಾಗಿದೆ. ಆತನ ಮನೆಯಲ್ಲಿ ತಂದೆ ರಾಜನ್, ತಾಯಿ ಮರುತೈ, ಸೋದರರಾದ ಜಿನು (27), ಜಿಬಿನ್ (18), ಸೋದರಿ ಆಯಂಡ್ರಿಯಾ (16), ಜಿನು ಅವರ ಪತ್ನಿ ಪ್ರಿಯಾಂಕಾ (25) ಮತ್ತು ಅಜ್ಜಿ ನಾಗಮ್ಮ ವಾಸವಿದ್ದರು. ಇದೀಗ ಅವರೆಲ್ಲರೂ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಮನೆಯಲ್ಲಿದ್ದ ಸಣ್ಣ ಸೋದರ ಶಿಜು (25) ಮಾತ್ರ ದುರಂತದಲ್ಲಿ ಬದುಕುಳಿದಿದ್ದಾನೆ. ಮುಂಡಕೈ ಭಾಗದಲ್ಲಿ ಜುಲೈ 28ರಂದು ಸಣ್ಣ ಮಟ್ಟಿನ ಭೂಕುಸಿತ ಉಂಟಾಗಿತ್ತು. ಇದನ್ನರಿತ ಸೌದಿ ಅರೇಬಿಯಾದಲ್ಲಿದ್ದ ಜಿಷ್ಣು ಗಾಬರಿಯಿಂದ ಮನೆಯವರಿಗೆ ಕರೆ ಮಾಡಿದ್ದರೂ ಸಂಪರ್ಕ ಸಿಕ್ಕಿರಲಿಲ್ಲ.
ಗಾಬರಿಗೊಂಡಿದ್ದ ಜಿಷ್ಣು ಮನೆಯವರ ಸಂಪರ್ಕಕ್ಕಾಗಿ ಪ್ರಯತ್ನಿಸುತ್ತಲೇ ಇದ್ದರು. ಜುಲೈ 30ರ ಸಂಜೆ ತನಕವೂ ಮನೆಯವರ ಸಂಪರ್ಕ ಸಾಧ್ಯವಾಗಿರಲಿಲ್ಲ. ಆಗಲೇ ಅವರಿಗೆ ಮನೆ ಕೊಚ್ಚಿ ಹೋಗಿರುವ ಬಗ್ಗೆ ತಿಳಿದುಬಂದಿತ್ತು. ಅಂದು ಮನೆಯವರು ಸಂಬಂಧಿಕರ ಮನೆಯಲ್ಲಿದ್ದಾರೆಂದು ತಿಳಿದು ನಿಟ್ಟುಸಿರು ಬಿಟ್ಟಿದ್ದರೂ, ಆನಂತರ ತಿಳಿದ ಮಾಹಿತಿ ಅವರನ್ನೇ ದಂಗುಬಡಿಸಿತ್ತು. ಭೂಕುಸಿತದಿಂದ ಎರಡೂ ಮನೆಯವರು ಕೊಚ್ಚಿಕೊಂಡು ಹೋಗಿದ್ದಾರೆನ್ನುವ ಸುದ್ದಿ ಸಿಕ್ಕಿತ್ತು. ಆನಂತರ, ಸೌದಿಯಿಂದ ಮರಳಿ ಬಂದಿದ್ದ ಜಿಷ್ಣು ತನ್ನವರಿಗಾಗಿ ಹುಡುಕಾಟ ನಡೆಸಿದ್ದಾರೆ. ತಂದೆ, ತಾಯಿಯ ಶವ ಸಿಕ್ಕಿದ್ದರೆ, ಉಳಿದವರ ಶವವೂ ಸಿಗಲಿಲ್ಲ. ಒಬ್ಬ ಸೋದರನೊಂದಿಗೆ ಜಿಷ್ಣುಗೆ ಕಣ್ಣೀರಿಡುವುದು ಬಿಟ್ಟರೆ ಬೇರೇನೂ ಉಳಿದಿಲ್ಲ.
At least 256 people have died and over 200 were injured after massive landslides struck the hilly areas near Meppadi in Kerela's Wayanad, Health Minister Veena George said. The Army has rescued around 1,000 people and 220 people are still missing, as rescue operations entered the third day.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm