ಬ್ರೇಕಿಂಗ್ ನ್ಯೂಸ್
04-08-24 01:32 pm HK News Desk ದೇಶ - ವಿದೇಶ
ವಯನಾಡ್, ಆ.04: ಭೂಕುಸಿತ ಸಂಭವಿಸಿ ಇಂದಿಗೆ 6 ದಿನ ಕಳೆದಿದೆ. 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಅತ್ತ ಬದುಕುಳಿದವರು ನೋವನ್ನು ಅರಗಿಸಿಕೊಳ್ಳುತ್ತಿರುವುದರ ಜೊತೆಗೆ ಕಳ್ಳರ ಕಾಟದಿಂದ ಕೂಡ ಬೇಸತ್ತಿದ್ದಾರೆ.
ವಯನಾಡು ಜುಲೈ 30ರಂದು ಭೂಕುಸಿತದಿಂದ ಸಂಭವಿಸಿತ್ತು. ಸದ್ಯ ಅಲ್ಲಿನ ಪ್ರದೇಶ ಅಕ್ಷರಶಃ ಸ್ಮಶಾನದಂತಾಗಿದೆ. ಇಂಥಾ ಸಂಕಷ್ಟದ ಸಮಯದಲ್ಲೂ ಕೆಲವರು ಮನೆ ಮನೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದಾರಂತೆ. ರಕ್ಷಣಾ ಕಾರ್ಯಚರಣೆ ಎಂಬ ನೆಪದಲ್ಲಿ ಕದಿಯುತ್ತಿದ್ದಾರಂತೆ. ಮನೆಯ ಡೋರ್ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರಂತೆ. ಸದ್ಯ ಈ ವಿಚಾರ ಬೆಳಕಿಗೆ ಬಂದಂತೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.
ಭೂಕುಸಿತದಿಂದ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ, ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯ ಉದ್ದೇಶದಿಂದ ಮನೆಗಳನ್ನು ಬಿಟ್ಟು ಹೋಗಿದ್ದೆವು. ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ. ಸದ್ಯ ಅವರು ತಂಗಿರುವ ರೆಸಾರ್ಟ್ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು. ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.




ರಾತ್ರಿ ವೇಳೆ ಅನುಮತಿ ಇಲ್ಲದೆ ಓಡಾಡುವಂತಿಲ್ಲ ;
ಭೂಕುಸಿತ ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ವಯನಾಡಿನ ಭೂಕುಸಿತದಲ್ಲಿ ಇದುವರೆಗೆ 219 ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ 154 ಪ್ರತ್ಯೇಕ ದೇಹದ ಭಾಗಗಳು ಸಿಕ್ಕಿವೆ. ಮೃತಪಟ್ಟವರಲ್ಲಿ 96 ಪುರುಷರು, 87 ಮಹಿಳೆಯರು ಮತ್ತು 36 ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
Residents of landslide-devastated villages in Kerala's Wayanad district who were forced to flee their homes have reported thefts from their abandoned properties, prompting police to increase night patrols. The displaced residents suspect that thieves might be taking advantage of the state's biggest humanitarian crisis to steal valuables.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm