ಬ್ರೇಕಿಂಗ್ ನ್ಯೂಸ್
04-08-24 01:32 pm HK News Desk ದೇಶ - ವಿದೇಶ
ವಯನಾಡ್, ಆ.04: ಭೂಕುಸಿತ ಸಂಭವಿಸಿ ಇಂದಿಗೆ 6 ದಿನ ಕಳೆದಿದೆ. 360ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಅತ್ತ ಬದುಕುಳಿದವರು ನೋವನ್ನು ಅರಗಿಸಿಕೊಳ್ಳುತ್ತಿರುವುದರ ಜೊತೆಗೆ ಕಳ್ಳರ ಕಾಟದಿಂದ ಕೂಡ ಬೇಸತ್ತಿದ್ದಾರೆ.
ವಯನಾಡು ಜುಲೈ 30ರಂದು ಭೂಕುಸಿತದಿಂದ ಸಂಭವಿಸಿತ್ತು. ಸದ್ಯ ಅಲ್ಲಿನ ಪ್ರದೇಶ ಅಕ್ಷರಶಃ ಸ್ಮಶಾನದಂತಾಗಿದೆ. ಇಂಥಾ ಸಂಕಷ್ಟದ ಸಮಯದಲ್ಲೂ ಕೆಲವರು ಮನೆ ಮನೆ ನುಗ್ಗಿ ಚಿನ್ನಾಭರಣ ದೋಚುತ್ತಿದ್ದಾರಂತೆ. ರಕ್ಷಣಾ ಕಾರ್ಯಚರಣೆ ಎಂಬ ನೆಪದಲ್ಲಿ ಕದಿಯುತ್ತಿದ್ದಾರಂತೆ. ಮನೆಯ ಡೋರ್ ಒಡೆದು ಬೆಲೆ ಬಾಳುವ ವಸ್ತುಗಳನ್ನು ಕದಿಯುತ್ತಿದ್ದಾರಂತೆ. ಸದ್ಯ ಈ ವಿಚಾರ ಬೆಳಕಿಗೆ ಬಂದಂತೆ ಪೊಲೀಸರು ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.
ಭೂಕುಸಿತದಿಂದ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ, ದುರಂತದ ಸಮಯದಲ್ಲಿ ನಮ್ಮ ಸುರಕ್ಷತೆಯ ಉದ್ದೇಶದಿಂದ ಮನೆಗಳನ್ನು ಬಿಟ್ಟು ಹೋಗಿದ್ದೆವು. ನಮ್ಮ ಮನೆಯ ಸ್ಥಿತಿಯನ್ನು ಪರಿಶೀಲಿಸಲು ನಾವು ಹಿಂತಿರುಗಿದಾಗ, ಬಾಗಿಲು ಮುರಿದು ತೆರೆದಿರುವುದನ್ನು ನೋಡಿದ್ದೇವೆ. ಸದ್ಯ ಅವರು ತಂಗಿರುವ ರೆಸಾರ್ಟ್ನಲ್ಲಿರುವ ಅವರ ಕೊಠಡಿಯನ್ನು ಕೂಡ ಕಳ್ಳರು ಗುರಿಯಾಗಿಸಿಕೊಂಡು ಅವರ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೂರಿದರು. ಶನಿವಾರ ಸಂಜೆ ಹೇಳಿಕೆ ನೀಡಿರುವ ಅಧಿಕಾರಿಗಳು, ಚೂರಲ್ಮಲಾ, ಮುಂಡಕ್ಕೈ ಸೇರಿದಂತೆ ವಿಪತ್ತು ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.




ರಾತ್ರಿ ವೇಳೆ ಅನುಮತಿ ಇಲ್ಲದೆ ಓಡಾಡುವಂತಿಲ್ಲ ;
ಭೂಕುಸಿತ ಪೀಡಿತ ಪ್ರದೇಶಗಳಿಗೆ ಅಥವಾ ಸಂತ್ರಸ್ತರ ಮನೆಗಳಿಗೆ ರಾತ್ರಿಯಲ್ಲಿ ಅನುಮತಿಯಿಲ್ಲದೆ ಪ್ರವೇಶಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಹೆಸರಿನಲ್ಲಿ ಅಥವಾ ರಾತ್ರಿಯಲ್ಲಿ ಪೊಲೀಸರ ಅನುಮತಿಯಿಲ್ಲದೆ ಪೀಡಿತ ಪ್ರದೇಶಗಳಿಗೆ ಅಥವಾ ಮನೆಗಳಿಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ ಎಂದು ಪ್ರಕಟಣೆ ತಿಳಿಸಿದೆ.
ವಯನಾಡಿನ ಭೂಕುಸಿತದಲ್ಲಿ ಇದುವರೆಗೆ 219 ಮೃತದೇಹಗಳು ಪತ್ತೆಯಾಗಿದ್ದು, ಅದರಲ್ಲಿ 154 ಪ್ರತ್ಯೇಕ ದೇಹದ ಭಾಗಗಳು ಸಿಕ್ಕಿವೆ. ಮೃತಪಟ್ಟವರಲ್ಲಿ 96 ಪುರುಷರು, 87 ಮಹಿಳೆಯರು ಮತ್ತು 36 ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.
Residents of landslide-devastated villages in Kerala's Wayanad district who were forced to flee their homes have reported thefts from their abandoned properties, prompting police to increase night patrols. The displaced residents suspect that thieves might be taking advantage of the state's biggest humanitarian crisis to steal valuables.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm