ಬ್ರೇಕಿಂಗ್ ನ್ಯೂಸ್
08-12-20 02:24 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.8: ಪಂಜಾಬ್ ಮೂಲದ ಖಲೀಸ್ತಾನ್ ಉಗ್ರರು ಮತ್ತು ಕಾಶ್ಮೀರದ ಐಎಸ್ಐ ಬೆಂಬಲಿತ ಉಗ್ರರು ಜೊತೆಯಾಗಿದ್ದಾರೆಯೇ ಎಂಬ ಅನುಮಾನ ದೆಹಲಿ ಪೊಲೀಸರಿಗೆ ಲಭಿಸಿದೆ. ದೆಹಲಿ ಪೊಲೀಸರು ಸೋಮವಾರ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಇಬ್ಬರು ಪಂಜಾಬ್ ಮೂಲದ ಸಿಖ್ಖರು ಮತ್ತು ಕಾಶ್ಮೀರದ ಮೂವರು ಇಂಡಿಯನ್ ಮುಜಾಹಿದೀನ್ ಉಗ್ರರು ಎನ್ನಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಶೌರ್ಯ ಚಕ್ರ ಪ್ರಶಸ್ತಿ ವಿಜೇತ ಪೊಲೀಸ್ ಅಧಿಕಾರಿ ಬಲ್ವಿಂದರ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಉಗ್ರರೊಂದಿಗೆ ಹೋರಾಡಿ ಸದೆಬಡಿದಿದ್ದ ಬಲ್ವಿಂದರ್ ಸಿಂಗ್ ಅವರನ್ನು ಕೇಂದ್ರ ಸರಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಈ ನಡುವೆ, ಪಂಜಾಬ್ ರಾಜ್ಯದ ಗುರುಗ್ರಾಮ್ ತೆರಳಿದ್ದ ಬಲ್ವಿಂದರ್ ಸಿಂಗ್ ಅವರನ್ನು ಖಲೀಸ್ತಾನ್ ಉಗ್ರರು ಗುಂಡು ಹಾರಿಸಿ ಕೊಂದಿದ್ದರು. ಪ್ರಕರಣ ಸಂಬಂಧಿಸಿ ವಿಶೇಷ ತನಿಖಾ ತಂಡ ಕಾರ್ಯಾಚರಣೆಗೆ ಇಳಿದಿತ್ತು.
ಸೋಮವಾರ ಮಧ್ಯಾಹ್ನ ದೆಹಲಿಯಲ್ಲಿ ಬಲ್ವಿಂದರ್ ಅವರನ್ನು ಕೊಂದಿದ್ದ ಉಗ್ರರು ಇದ್ದಾರೆಂಬ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು. ಉಗ್ರರ ಕಡೆಯಿಂದ ಪ್ರತಿದಾಳಿ ನಡೆಸಿದಾಗ, ಪೊಲೀಸರು ಎನ್ ಕೌಂಟರ್ ಮುಂದಾಗಿದ್ದು ಐವರು ಬಂಧಿಸಲ್ಪಟ್ಟಿದ್ದಾರೆ. ಈ ಪೈಕಿ ಗುರ್ಜಿತ್ ಸಿಂಗ್ ಮತ್ತು ಸುಖದೀಪ್ ಸಿಂಗ್ ಪಂಜಾಬ್ ರಾಜ್ಯದ ಗುರುದಾಸ್ ಪುರ ನಿವಾಸಿಗಳಾಗಿದ್ದು, ಬಲ್ವಿಂದರ್ ಸಿಂಗ್ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಕಾಶ್ಮೀರದ ಶಬೀರ್ ಅಹ್ಮದ್, ಅಯೂಬ್ ಪಠಾಣ್, ರಿಯಾಜ್ ರಾಥೋರ್ ಇತರ ಮೂವರು ಬಂಧಿತರಾಗಿದ್ದು ಇಂಡಿಯನ್ ಮುಜಾಹಿದೀನ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಕಾಶ್ಮೀರ ಮತ್ತು ಪಂಜಾಬಿನ ಸಿಖ್ ಉಗ್ರರು ಜೊತೆಯಾಗಿದ್ದು ಹೇಗೆ ಎನ್ನುವ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಡಿಸಿಪಿ ಪ್ರಮೋದ್ ಕುಮಾರ್ ಖುಷ್ವಾಹ್ ತಿಳಿಸಿದ್ದಾರೆ.
ದೆಹಲಿಯ ಲಕ್ಷ್ಮೀ ನಗರ್ ಎಂಬಲ್ಲಿ ಕಾರ್ಯಾಚರಣೆ ನಡೆದಿದೆ. ಖಲೀಸ್ತಾನ್ ಉಗ್ರರು ಕಾಶ್ಮೀರದ ಮೂವರಿಂದ ಹಣ ಪಡೆದು ಬಲ್ವಿಂದರ್ ಹತ್ಯೆ ಎಸಗಿರುವ ಸಾಧ್ಯತೆ ಇದೆ. ಮೂರು ಪಿಸ್ತೂಲ್, ಎರಡು ಕಿಲೋ ಹೆರಾಯಿನ್, ಒಂದು ಲಕ್ಷ ನಗದನ್ನು ಐವರಿಂದ ವಶಕ್ಕೆ ಪಡೆಯಲಾಗಿದೆ. ಮೂರು ಕಾರುಗಳಲ್ಲಿ ಈ ಐವರು ಆರೋಪಿಗಳು ಪ್ರಯಾಣಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿತ್ತು. ಹೆರಾಯಿನ್ ಮಾರಾಟ ಮಾಡಿದ ಹಣವನ್ನು ವಿಧ್ವಂಸಕ ಕೃತ್ಯಕ್ಕೆ ಬಳಸುತ್ತಿದ್ದರು. ಎಂದು ಪ್ರಮೋದ್ ಖುಷ್ವಾಹ್ ಹೇಳಿದ್ದಾರೆ.
ಖಲೀಸ್ತಾನ್ ಉಗ್ರರ ಮಾಸ್ಟರ್ ಮೈಂಡ್ ಆಗಿರುವ ಸುಖ್ ಬಿಖಾರಿವಾಲ್ ಸಿಂಗ್ ದುಬೈ ಅಥವಾ ಪಾಕಿಸ್ತಾನದಲ್ಲಿದ್ದಾನೆ ಎನ್ನಲಾಗುತ್ತಿದ್ದು, ಅಲ್ಲಿಂದಲೇ ತನ್ನ ಸಹಚರರ ಮೂಲಕ ಕೃತ್ಯ ಮಾಡಿಸುತ್ತಿದ್ದಾನೆ. ಐಎಸ್ಐನಿಂದ ಹಣ ಪಡೆದು ದೆಹಲಿಯಲ್ಲಿ ವಿವಿಧ ಅಧಿಕಾರಿಗಳನ್ನು ಕೊಲ್ಲಲು ಪ್ಲಾನ್ ಹಾಕಿದ್ದ. ಈ ಹಿಂದೆ ಐಎಸ್ಐ ಸೂಚನೆಯಂತೆ, ಅ.16ರಂದು ಶೌರ್ಯ ಚಕ್ರ ವಿಜೇತ ಅಧಿಕಾರಿ ಬಲ್ವಿಂದರ್ ಸಿಂಗ್ ನನ್ನು ಗುರ್ಜಿತ್ ಸಿಂಗ್ ಮತ್ತು ಸುಖದೀಪ್ ಸಿಂಗ್ ಕೊಂದಿದ್ದರು. ಆನಂತರ ತಲೆಮರೆಸಿಕೊಂಡಿದ್ದು, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಇನ್ನಷ್ಟು ಅಧಿಕಾರಿಗಳನ್ನು ಕೊಲ್ಲಲು ಸಂಚು ಹೂಡಿದ್ದರು. ಇದೀಗ ಅವರಿಗೆ ಸಾಥ್ ನೀಡಿದ್ದ ಕಾಶ್ಮೀರಿ ಉಗ್ರರ ಸಹಿತ ಖಲೀಸ್ತಾನ್ ಉಗ್ರರು ಸಿಕ್ಕಿಬಿದ್ದಿದ್ದಾರೆ.
ಸದಾಕತ್ ಹೆಸರಲ್ಲಿ ನಾರ್ಕೋ ಟೆರರಿಸಮ್ !
ಆರೋಪಿಗಳ ಪೈಕಿ ಅಯೂಬ್ ಪಠಾಣ್ ತಳಮಟ್ಟದ ಕಾರ್ಯ ಚಟುವಟಿಕೆಯನ್ನು ನೋಡಿಕೊಂಡಿದ್ದ. ಅಯೂಬ್ ಸೋದರ ಅಬ್ದುಲ್ ಮಜೀದ್ ಖಾನ್, ರಾವಲ್ಪಿಂಡಿಯಲ್ಲಿದ್ದು ಇಂಡಿಯನ್ ಮುಜಾಹಿದೀನ್ ಸಂಘಟನೆಯ ಸೀನಿಯರ್ ಆಪರೇಟಿವ್ ಆಫೀಸರ್ ಆಗಿದ್ದಾನೆ. ಮಜೀದ್ ಸಲಹೆಯಂತೆ ಅಯೂಬ್ ಕಾರ್ಯ ಚಟುವಟಿಕೆ ಮಾಡಿಕೊಂಡಿದ್ದ. ಮಜೀದ್ ಖಾನ್, ಪಾಕಿಸ್ತಾನದ ಉಗ್ರ ಸಂಘಟನೆಗಳ ನಡುವೆ ಸದಾಕತ್ ಎಂಬ ಕೋಡ್ ನೇಮ್ ಇಟ್ಟುಕೊಂಡಿದ್ದಾನೆ. ಉತ್ತರ ಭಾರತದಲ್ಲಿ ನಾರ್ಕೋ ಟೆರರಿಸಮ್ ವಿಸ್ತರಿಸಲು ಹಣದ ಪೂರೈಕೆ ಮಾಡುವ ಜಾಲವನ್ನು ಸದಾಕತ್ ನೋಡಿಕೊಂಡಿದ್ದಾನೆ. ಭಾರತಕ್ಕೆ ಒಳನುಸುಳಿ ಬರುವವರ ಜೊತೆ ಹೆರಾಯಿನ್, ಇನ್ನಿತರ ಡ್ರಗ್ಸ್ ಗಳನ್ನು ಕಳಿಸಿಕೊಟ್ಟು ಪಂಜಾಬ್, ಕಾಶ್ಮೀರ, ದೆಹಲಿಯಲ್ಲಿ ಮಾರಾಟ ಆಗುವಂತೆ ಜಾಲ ಹೆಣೆದಿದ್ದ. ಈ ಕೆಲಸವನ್ನು ಖಲೀಸ್ತಾನ್ ಮತ್ತು ಕಾಶ್ಮೀರದ ಉಗ್ರರ ಬೆಂಬಲಿತರಿಂದ ಮಾಡಿಸಿಕೊಳ್ಳುತ್ತಿದ್ದ ಎನ್ನುವ ವಿಚಾರ ಬಯಲಾಗಿದೆ.
The Special Cell of Delhi Police on Monday arrested five suspected terrorists after an encounter with the police in Delhi’s Shakarpur area.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm