ಬ್ರೇಕಿಂಗ್ ನ್ಯೂಸ್
05-08-24 09:04 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟ ಬೆನ್ನಲ್ಲೇ ಪ್ರಧಾನಿ ನಿವಾಸಕ್ಕೆ ಪ್ರತಿಭಟನಕಾರರು ನುಗ್ಗಿದ್ದು ವಿಕೃತಿ ಮೆರೆದಿದ್ದಾರೆ. ಶೇಖ್ ಹಸೀನಾ ನಿವಾಸದಲ್ಲಿದ್ದ ಬಿರಿಯಾನಿ ಸೇರಿ ಎಲ್ಲ ಆಹಾರವನ್ನು ಸೇವಿಸಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ಕದ್ದಿದ್ದಾರೆ. ಮನೆಯಲ್ಲಿ ಪ್ರತಿಭಟನಾಕಾರರ ಹುಚ್ಚಾಟದ ವಿಡಿಯೋಗಳು ವೈರಲ್ ಆಗಿವೆ.
ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಆರಂಭಿಸಿದ ಪ್ರತಿಭಟನಾಕಾರರು, ಪ್ರಧಾನಿ ರಾಜೀನಾಮೆ ಬಳಿಕ ಅವರ ಭವ್ಯ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಶೇಖ್ ಹಸೀನಾ ಮನೆಯಲ್ಲಿರುವ ಸ್ವಿಮ್ಮಿಂಗ್ ಪೂಲ್ನಲ್ಲಿ ಸಾಮೂಹಿಕವಾಗಿ ಈಜಾಡಿದ್ದಾರೆ, ಬೆಡ್ರೂಮ್ನಲ್ಲಿ ಮಲಗಿ, ಐಷಾರಾಮಿ ವಸ್ತುಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಭಕ್ಷ್ಯ ಭೋಜನ ಸವಿದು, ಕುಣಿದು ಕುಪ್ಪಳಿಸಿ ಮಜಾ ಉಡಾಯಿಸಿದ್ದಾರೆ. ಆಮೂಲಕ ಪ್ರಧಾನಿ ಮೇಲಿನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶೇಖ್ ಹಸೀನಾ ಫೋಟೊಗಳಿಗೆ ಮಸಿ ಬಳಿಯಲಾಗಿದೆ. ಶೇಖ್ ಹಸೀನಾ ಅವರ ತಂದೆಯ ಮೂರ್ತಿಗಳನ್ನು ಉದ್ರಿಕ್ತರು ಒಡೆದು ಹಾಕಿದ್ದಾರೆ. ಕೆಲ ಸರ್ಕಾರಿ ಕಚೇರಿಗಳನ್ನೂ ಧ್ವಂಸಗೊಳಿಸಿದ್ದಾರೆ. ದೇಶಾದ್ಯಂತ ಕರ್ಫ್ಯೂ ನಡುವಲ್ಲೇ ಸುಮಾರು 4 ಲಕ್ಷ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.
![]()


![]()


ಈ ನಡುವೆ, ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ಹೇಳಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಜಮಾತ್-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್ಐ ಬೆಂಬಲ ಇದೆ ಎನ್ನಲಾಗಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ನೀಡುತ್ತಿದೆ ಎಂದು ತಿಳಿದುಬಂದಿದೆ.
ಶೇಖ್ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನ ಕುತಂತ್ರ ಮಾಡಿದೆಯೆಂದು ಹೇಳಲಾಗುತ್ತಿದೆ.
Hundreds of Bangladeshi protesters stormed into Prime Minister Sheikh Hasina's official residence as the leader's whereabouts were unknown, after demonstrators defied a military curfew to march in the capital Dhaka.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm