ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.





ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm