ಬ್ರೇಕಿಂಗ್ ನ್ಯೂಸ್
05-08-24 10:42 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್.5: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಉದ್ರಿಕ್ತರ ಗುಂಪೊಂದು ಸೋಮವಾರ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಿದ್ದು, ನಾಲ್ಕು ಹಿಂದೂ ದೇವಾಲಯಗಳಿಗೆ ಹಾನಿ ಮಾಡಿದೆ ಎಂದು ಹಿಂದೂ ಬೌದ್ಧ ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ತಿಳಿಸಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ಪದಚ್ಯುತಿ ನಂತರ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮುಖಂಡರು ಭಯಭೀತರಾಗಿದ್ದಾರೆ. ಢಾಕಾದ ಧನ್ಮಂಡಿ ಪ್ರದೇಶದಲ್ಲಿರುವ ಇಂದಿರಾಗಾಂಧಿ ಸಾಂಸ್ಕೃತಿಕ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.





ಬಂಗಬಂಧು ಸ್ಮಾರಕ ಮ್ಯೂಸಿಯಂ ಸೇರಿದಂತೆ ಢಾಕಾದಲ್ಲಿ ಹಲವು ಕಡೆಗಳಲ್ಲಿ ಸರ್ಕಾರಿ ಕಚೇರಿಗಳಿಗೂ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. 1975 ರಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವಾಗ ಹತ್ಯೆಗೀಡಾದ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಸ್ಮರಣಾರ್ಥ ಈ ಮ್ಯೂಸಿಯಂ ಸ್ಥಾಪಿಸಲಾಗಿತ್ತು.
ಮಾರ್ಚ್ 2010 ರಲ್ಲಿ ಉದ್ಘಾಟನೆಗೊಂಡ ಇಂದಿರಾ ಗಾಂಧಿ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರ ಆಯೋಜಿಸುವ ಮೂಲಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಾಂಸ್ಕೃತಿಕ ವಿನಿಮಯವನ್ನು ಪ್ರೋತ್ಸಾಹಿಸಲಾಗುತಿತ್ತು. ಯೋಗ, ಹಿಂದಿ, ಭಾರತೀಯ ಶಾಸ್ತ್ರೀಯ ಗಾಯನ, ಸಂಗೀತ, ಕಥಕ್ ಮತ್ತು ಮಣಿಪುರಿಯಂತಹ ಭಾರತೀಯ ನೃತ್ಯಗಳಿಗೆ ಭಾರತ ಮೂಲದ ವೃತ್ತಿಪರರು ಮತ್ತು ತರಬೇತುದಾರರು ಇಲ್ಲಿ ತರಬೇತಿ ನೀಡುತ್ತಿದ್ದರು. ಭಾರತೀಯ ಕಲೆ, ಸಂಸ್ಕೃತಿ, ರಾಜಕೀಯ, ಅರ್ಥಶಾಸ್ತ್ರ ಮತ್ತು ಕಾದಂಬರಿ ಕ್ಷೇತ್ರಗಳಲ್ಲಿ 21,000 ಕ್ಕೂ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಈ ಕೇಂದ್ರದಲ್ಲಿತ್ತು.
An unruly mob on Monday damaged the Indira Gandhi Cultural Centre (IGCC) and the Bangabandhu Memorial Museum located at the Dhanmondi area in the Bangladesh capital, eyewitnesses said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm