ಬ್ರೇಕಿಂಗ್ ನ್ಯೂಸ್
07-08-24 11:47 am HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.7: ಕೊನೆಯ ಕ್ವಾರ್ಟರ್ ನಲ್ಲಿ ರಕ್ಷಣಾ ವೈಫಲ್ಯ ಅನುಭವಿಸಿದ ಭಾರತ ಪುರುಷರ ಹಾಕಿ ತಂಡವು ಸೆಮಿ ಫೈನಲ್ ನಲ್ಲಿ ಜರ್ಮನಿ ಎದುರು 2-3 ಗೋಲುಗಳಿಂದ ವೀರೋಚಿತ ಸೋಲನುಭವಿಸಿದೆ. ಗತ ವೈಭವವನ್ನು ಸೃಷ್ಟಿಸುವ ಹಾದಿಯಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದ್ದ ಹರ್ಮನ್ ಪ್ರೀತ್ ಸಿಂಗ್ ಬಳಗ ಮಹತ್ವದ ಪಂದ್ಯದಲ್ಲಿ ಸೋತು ನಿರಾಸೆ ಕಂಡಿತು.
ಕಳೆದ ಆವೃತ್ತಿಯಲ್ಲಿ ಕಂಚಿನ ಪದಕ ವಿಜೇತ ತಂಡ ಆಗಸ್ಟ್ 8ರಂದು ಕಂಚಿನ ಪದಕಕ್ಕಾಗಿ ನಡೆಯಲಿರುವ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಸವಾಲು ಎದುರಿಸಲಿದೆ. ಪಂದ್ಯ ಮುಕ್ತಾಯಕ್ಕೆ 3 ನಿಮಿಷಗಳು ಬಾಕಿ ಇರುವಾಗ ಗೋಲ್ ಕೀಪರ್ ಹೊರಗಿಟ್ಟು ರಕ್ಷಣಾ ವಿಭಾಗವನ್ನು ಹೆಚ್ಚಿಸಿಕೊಂಡ ಹೊರತಾಗಿಯೂ ಭಾರತ ಸೋಲಿನಿಂದ ಪಾರಾಗಲು ಸಾಧ್ಯವಾಗಲಿಲ್ಲ. 54 ನಿಮಿಷದಲ್ಲಿ ಭಾರತೀಯರ ರಕ್ಷಣಾ ಪಡೆಯನ್ನು ಕಣ್ತಪ್ಪಿಸಿದ ಜರ್ಮನಿಯ ಮಾರ್ಕೋ ಗೋಲು ಗಳಿಸಿ ಗೆಲುವಿನ ರೂವಾರಿಯಾದರು.


ಪಂದ್ಯದ 7ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದ ನಾಯಕ ಮನ್ ಪ್ರೀತ್ ಸಿಂಗ್ ಭಾರತಕ್ಕೆ 1-0 ಅಂತರದ ಮುನ್ನಡೆ ಕಲ್ಪಿಸಿದರು. ದ್ವಿತೀಯಾರ್ಧದಲ್ಲಿ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಭಾರತ ವೈಫಲ್ಯ ಅನುಭವಿಸಿತು. ಇದನ್ನು ಲಾಭವಾಗಿಸಿಕೊಂಡ ಗೊಂಜಾಲೋ 18ನೇ ನಿಮಿಷದಲ್ಲಿ ಗೋಲು ಗಳಿಸಿ ಜರ್ಮನಿ ಹೋರಾಟವನ್ನು 1-1ರಲ್ಲಿ ಸಮಬಲಗೊಳಿಸಿದರು. ದ್ವಿತೀಯ ಕ್ವಾರ್ಟರ್ ಮುಕ್ತಾಯಕ್ಕೆ 3 ನಿಮಿಷ ಬಾಕಿ ಇರುವಾಗ ಕ್ರಿಸ್ಟೋಫರ್ ಗೋಲು ಗಳಿಸಿ ಜರ್ಮನಿ ತಂಡದ ಮುನ್ನಡೆಯನ್ನು 2-1ಕ್ಕೆ ವಿಸ್ತರಿಸಿದರು. ಬಳಿಕ ಸುಖಜೀತ್ ಸಿಂಗ್ 36ನೇ ನಿಮಿಷದಲ್ಲಿ ಗೋಲು ಬಾರಿಸಿ 2-2ಕ್ಕೆ ಸಮಬಲಗೈದರು.
ಭಾರತ ಪರ ನಾಯಕ ಹರ್ಮನ್ ಪ್ರೀತ್ ಸಿಂಗ್, ಸುಖಜಿತ್ ಸಿಂಗ್ ತಲಾ ಒಂದು ಗೋಲು ಗಳಿಸಿದರೆ, ಜರ್ಮನಿ ತಂಡದ ಪರ ಗೊಂಜಾಲೋ ಪೆಯಿಲ್ಲತ್, ಕ್ರಿಸ್ಟೋಫರ್, ಮಾರ್ಕೋ ಗೋಲು ಬಾರಿಸಿದರು. ಫೈನಲಿನಲ್ಲಿ ನೆದರ್ಲೆಂಡ್ ಮತ್ತು ಜರ್ಮನಿ ಚಿನ್ನದ ಪದಕಕ್ಕಾಗಿ ಪೈಪೋಟಿ ನಡೆಸಲಿದೆ. ಮತ್ತೊಂದು ಸೆಮಿ ಫೈನಲ್ ಪಂದ್ಯದಲ್ಲಿ ನೆದರ್ಲೆಂಡ್ 4-0 ಅಂತರದಿಂದ ಸ್ಪೇನ್ ವಿರುದ್ಧ ಏಕಪಕ್ಷೀಯ ಜಯ ದಾಖಲಿಸಿ ಫೈನಲ್ ಗೆಲ್ಲುವ ತವಕದಲ್ಲಿದೆ.
India some close in the final second!!! But it is not enough as it is Germany who go into the Gold Medal match after winning this semi-final by 3-2. India's wait for an Olympics final will have to wait, and they will face Spain in the Bronze medal match.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm