ಬ್ರೇಕಿಂಗ್ ನ್ಯೂಸ್
 
            
                        10-08-24 09:35 pm HK News Desk ದೇಶ - ವಿದೇಶ
 
            ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
 
            
            
            The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm