ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm