ಬ್ರೇಕಿಂಗ್ ನ್ಯೂಸ್
11-08-24 01:45 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 11: ಮೀಸಲಾತಿ ವಿರೋಧಿ ಹೋರಾಟಗಾರರ ಹಿಂಸಾಚಾರ ಅಲ್ಪಸಂಖ್ಯಾತ ಹಿಂದುಗಳ ಮೇಲೆ ತಿರುಗಿದ ಬೆನ್ನಲ್ಲೇ ಬಾಂಗ್ಲಾ ದೇಶದಲ್ಲಿ ಹಿಂದೂ ಸಮುದಾಯದ ಲಕ್ಷಾಂತರ ಮಂದಿ ಬೀದಿಗೆ ಇಳಿದಿದ್ದಾರೆ. ತಮ್ಮ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಹಿಂದೂಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು ನಾವೆಲ್ಲೂ ಹೋಗಲ್ಲ. ನಾವು ಬಾಂಗ್ಲಾದವರೇ. ಬಾಂಗ್ಲಾ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತ ಧರಣಿ ನಡೆಸಿದ್ದಾರೆ.
ಬಾಂಗ್ಲಾ ದೇಶದ ಮಾಜಿ ಪ್ರಧಾನ ಮಂತ್ರಿ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಶುರುವಾದ ಹಿಂದೂಗಳ ಮೇಲಿನ ಹಿಂಸಾಚಾರ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಹಿಂದೂಗಳು ತಮ್ಮ ಆಕ್ರೋಶ ಹೊರ ಹಾಕುತ್ತಿದ್ಧಾರೆ. ರಾಜಧಾನಿ ಢಾಕಾ ಹಾಗೂ ಚಿತ್ತಗಾಂಗ್ನಲ್ಲಿ ಹಿಂದೂಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾ ದೇಶದಲ್ಲಿ ಢಾಕಾ ಬಳಿಕ ಎರಡನೇ ಅತಿ ದೊಡ್ಡ ನಗರವಾದ ಚಿತ್ತಗಾಂಗ್ನಲ್ಲಿ ಲಕ್ಷಾಂತರ ಮಂದಿ ಹಿಂದೂಗಳು ಒಂದೆಡೆ ಸೇರಿ ಭಾರೀ ಜನಾಂದೋಲನ ನಡೆಸಿದರು.
ಬಾಂಗ್ಲಾ ದೇಶದಾದ್ಯಂತ 52 ಜಿಲ್ಲೆಗಳಲ್ಲಿ ಸುಮಾರು 205 ಕಡೆ ಅಲ್ಪಸಂಖ್ಯಾತ ಹಿಂದುಗಳನ್ನು ಟಾರ್ಗೆಟ್ ಮಾಡಿ ದಾಳಿಗಳು ನಡೆದಿವೆ. ನೂರಾರು ಹಿಂದೂಗಳು ಗಾಯಗೊಂಡಿದ್ದು ಹಲವರು ಸಾವನ್ನಪ್ಪಿದ್ದಾರೆ. ಹಿಂದೂಗಳ ಮನೆ ಹಾಗೂ ಉದ್ಯಮಗಳ ಮೇಲೂ ದಾಳಿ ನಡೆದಿದೆ. ಸಾಕಷ್ಟು ಕಡೆ ಹಿಂದೂ ದೇಗುಲಗಳಿಗೂ ಹಾನಿ ಮಾಡಲಾಗಿದೆ. ಶೇಖ್ ಹಸೀನಾ ಅವರ ಆವಾಮಿ ಲೀಗ್ ಪಕ್ಷದ ನಾಯಕರಾಗಿದ್ದ ಇಬ್ಬರು ಹಿಂದುಗಳನ್ನು ಹತ್ಯೆ ಮಾಡಲಾಗಿದೆ. ಕೆಲವು ದೇಗುಲಗಳ ಮೇಲೆ ದಾಳಿ ನಡೆಸಿ, ಬೆಂಕಿ ಇಟ್ಟಿರುವ ಘಟನೆಗಳೂ ನಡೆದಿವೆ. ಇದೇ ವೇಳೆ, ಸಾವಿರಾರು ಮಂದಿ ಬಾಂಗ್ಲಾ ಬಿಟ್ಟು ಭಾರತಕ್ಕೆ ಬರಲು ಗಡಿಯಲ್ಲಿ ಜಮಾಯಿಸಿರುವ ಘಟನೆಗಳೂ ನಡೆದಿವೆ.
ಇದೀಗ ತಮ್ಮ ಮೇಲಾದ ದೌರ್ಜನ್ಯ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಮುದಾಯ, ತಮ್ಮ ಮೇಲೆ ದಾಳಿ ಮಾಡಿದವರನ್ನು ಗುರುತಿಸಿ ಅವರಿಗೆ ಶಿಕ್ಷೆ ಕೊಡಲು ವಿಶೇಷ ನ್ಯಾಯ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿದ್ದಾರೆ. ಬಾಂಗ್ಲಾ ದೇಶದ ಸಂಸತ್ನಲ್ಲಿ ಶೇ. 10 ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತ ಹಿಂದೂಗಳಿಗೆ ಮೀಸಲು ಇಡುವಂತೆಯೂ ಆಗ್ರಹಿಸಿದ್ದಾರೆ. ಜೊತೆಯಲ್ಲೇ ಅಲ್ಪಸಂಖ್ಯಾತ ರಕ್ಷಣಾ ಕಾನೂನು ಜಾರಿಗೆ ತರಬೇಕು ಎಂದೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಹಿಂದುಗಳ ಮೇಲೆ ದಾಳಿಯಿಂದ ಕಂಗೆಟ್ಟ ಹಂಗಾಮಿ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಿಸ್, ದಾಳಿ ನಿಲ್ಲಿಸದಿದ್ದರೆ ರಾಜಿನಾಮೆ ಕೊಟ್ಟು ಹೋಗುತ್ತೇನೆ ಎಂದು ಹೋರಾಟಗಾರರಿಗೆ ಎಚ್ಚರಿಸಿದ್ದಾರೆ.
Members of at least six Hindu organisations marched to the office of the Assistant High Commissioner of Bangladesh in Guwahati to protest the targeted attacks on minorities during the political turmoil in the neighbouring country. The groups, including Kutumba Surakshya Parishad and Hindu Surakshya Sena, also handed over a memorandum to the representatives of Bangladesh containing a list of demands and requests.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm