ಬ್ರೇಕಿಂಗ್ ನ್ಯೂಸ್
08-12-20 04:48 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ.
ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.

ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾತುಕತೆಗೆ ಹೋಗಲಿದ್ದಾರೆ" ಎಂದು ರೈತ ಮುಖಂಡ ರಾಕೇಶ್ ತಿಕೈಟ್ ಹೇಳಿದರು.
ಮಂಗಳವಾರ ರೈತರು ಕರೆ ನೀಡಿದ್ದ ಭಾರತ್ ಬಂದ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್ಎಸ್ ಬೆಂಬಲ ನೀಡಿದ್ದವು. ಹಲವಾರು ಸಂಘಟನೆಗಳು ಸಹ ಬಂದ್ ಬೆಂಬಲಿಸಿದ್ದವು. ಆದ್ದರಿಂದ, ಈ ವಿಚಾರ ಗಂಭೀರವಾಗಿದೆ.

ಶನಿವಾರ ಕೇಂದ್ರ ಕೃಷಿ ಸಚಿವರು ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ್ದರು. ಕೃಷಿ ನೀತಿಗಳನ್ನು ವಾಪಸ್ ಪಡೆಯುತ್ತಿರೋ?, ಇಲ್ಲವೋ? ಎಂಬ ಬೋರ್ಡ್ಗಳನ್ನು ಹಿಡಿದು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾತುಕತೆ ವಿಫಲವಾಗಿತ್ತು.
ಕೃಷಿ ಸಚಿವರು ಡಿಸೆಂಬರ್ 9ರಂದು ಮತ್ತೊಮ್ಮೆ ರೈತರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ರೈತರು ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಆದರೆ, ಒಂದು ದಿನ ಮೊದಲೇ ಸರ್ಕಾರ ಮಾತುಕತೆಗೆ ಕರೆದಿದೆ.
Home Minister Amit Shah has called farmers for talks this evening, a day before the government's sixth round of negotiations to end massive protests against farm laws.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm