ಬ್ರೇಕಿಂಗ್ ನ್ಯೂಸ್
08-12-20 04:48 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ.
ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.

ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾತುಕತೆಗೆ ಹೋಗಲಿದ್ದಾರೆ" ಎಂದು ರೈತ ಮುಖಂಡ ರಾಕೇಶ್ ತಿಕೈಟ್ ಹೇಳಿದರು.
ಮಂಗಳವಾರ ರೈತರು ಕರೆ ನೀಡಿದ್ದ ಭಾರತ್ ಬಂದ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್ಎಸ್ ಬೆಂಬಲ ನೀಡಿದ್ದವು. ಹಲವಾರು ಸಂಘಟನೆಗಳು ಸಹ ಬಂದ್ ಬೆಂಬಲಿಸಿದ್ದವು. ಆದ್ದರಿಂದ, ಈ ವಿಚಾರ ಗಂಭೀರವಾಗಿದೆ.

ಶನಿವಾರ ಕೇಂದ್ರ ಕೃಷಿ ಸಚಿವರು ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ್ದರು. ಕೃಷಿ ನೀತಿಗಳನ್ನು ವಾಪಸ್ ಪಡೆಯುತ್ತಿರೋ?, ಇಲ್ಲವೋ? ಎಂಬ ಬೋರ್ಡ್ಗಳನ್ನು ಹಿಡಿದು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾತುಕತೆ ವಿಫಲವಾಗಿತ್ತು.
ಕೃಷಿ ಸಚಿವರು ಡಿಸೆಂಬರ್ 9ರಂದು ಮತ್ತೊಮ್ಮೆ ರೈತರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ರೈತರು ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಆದರೆ, ಒಂದು ದಿನ ಮೊದಲೇ ಸರ್ಕಾರ ಮಾತುಕತೆಗೆ ಕರೆದಿದೆ.
Home Minister Amit Shah has called farmers for talks this evening, a day before the government's sixth round of negotiations to end massive protests against farm laws.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm