ಬ್ರೇಕಿಂಗ್ ನ್ಯೂಸ್
08-12-20 04:48 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ.
ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.

ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾತುಕತೆಗೆ ಹೋಗಲಿದ್ದಾರೆ" ಎಂದು ರೈತ ಮುಖಂಡ ರಾಕೇಶ್ ತಿಕೈಟ್ ಹೇಳಿದರು.
ಮಂಗಳವಾರ ರೈತರು ಕರೆ ನೀಡಿದ್ದ ಭಾರತ್ ಬಂದ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್ಎಸ್ ಬೆಂಬಲ ನೀಡಿದ್ದವು. ಹಲವಾರು ಸಂಘಟನೆಗಳು ಸಹ ಬಂದ್ ಬೆಂಬಲಿಸಿದ್ದವು. ಆದ್ದರಿಂದ, ಈ ವಿಚಾರ ಗಂಭೀರವಾಗಿದೆ.

ಶನಿವಾರ ಕೇಂದ್ರ ಕೃಷಿ ಸಚಿವರು ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ್ದರು. ಕೃಷಿ ನೀತಿಗಳನ್ನು ವಾಪಸ್ ಪಡೆಯುತ್ತಿರೋ?, ಇಲ್ಲವೋ? ಎಂಬ ಬೋರ್ಡ್ಗಳನ್ನು ಹಿಡಿದು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾತುಕತೆ ವಿಫಲವಾಗಿತ್ತು.
ಕೃಷಿ ಸಚಿವರು ಡಿಸೆಂಬರ್ 9ರಂದು ಮತ್ತೊಮ್ಮೆ ರೈತರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ರೈತರು ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಆದರೆ, ಒಂದು ದಿನ ಮೊದಲೇ ಸರ್ಕಾರ ಮಾತುಕತೆಗೆ ಕರೆದಿದೆ.
Home Minister Amit Shah has called farmers for talks this evening, a day before the government's sixth round of negotiations to end massive protests against farm laws.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm