ಬ್ರೇಕಿಂಗ್ ನ್ಯೂಸ್
18-08-24 05:46 pm HK News Desk ದೇಶ - ವಿದೇಶ
ಕೊಝಿಕ್ಕೋಡ್, ಆ 18: ಬ್ಯಾಂಕ್ ಮ್ಯಾನೇಜರ್ ಒಬ್ಬ ತನ್ನ ಶಾಖೆಯಲ್ಲಿ ಗಿರವಿ ಇಟ್ಟಿದ್ದ 17 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಆರೋಪಿಯನ್ನು ತಮಿಳುನಾಡಿನ ಮೆಟ್ಟುಪಾಳ್ಯಂ ಪತಿ ಸ್ಟ್ರೀಟ್ ನಿವಾಸಿ ಮಾಧಾ ಜಯಕುಮಾರ್ (34) ಎಂದು ಗುರುತಿಸಲಾಗಿದೆ.
ಜಯಕುಮಾರ್ ಬ್ಯಾಂಕ್ ಆಫ್ ಮಹಾರಾಷ್ಟ್ರದ ವಡಕರ ಶಾಖೆಯಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದ. ಜಯಕುಮಾರ್ 26 ಕೆಜಿಗಳಷ್ಟು ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಶಾಖೆಯಲ್ಲಿ ಮರು ಮೌಲ್ಯಮಾಪನ ಪ್ರಕ್ರಿಯೆ ನಡೆಸುತ್ತಿರುವ ಸಂದರ್ಭದಲ್ಲಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಗ್ರಾಹಕರು ಗಿರವಿ ಇಟ್ಟಿದ್ದ ಅಸಲಿ ಚಿನ್ನವನ್ನು ನಕಲಿ ಚಿನ್ನದಿಂದ ಬದಲಾಯಿಸಿರುವುದು ಗೊತ್ತಾಗಿದೆ. ಈ ಸಂಬಂಧ ವಡಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ನ ನೂತನ ವ್ಯವಸ್ಥಾಪಕ ವಿ. ಇರ್ಷಾದ್ ಈ ಅಕ್ರಮವನ್ನು ಬಯಲಿಗೆಳೆದಿದ್ದಾರೆ.
ಕಳೆದ ಮೂರು ವರ್ಷಗಳಿಂದ ವಡಕರ ಶಾಖೆಯ ವ್ಯವಸ್ಥಾಪಕರಾಗಿದ್ದ ಮಾಧಾ ಜಯಕುಮಾರ್ ಅವರನ್ನು ಇತ್ತೀಚೆಗೆ ಜುಲೈನಲ್ಲಿ ಎರ್ನಾಕುಲಂನ ಪಲರಿವಟ್ಟಂ ಶಾಖೆಗೆ ವರ್ಗಾಯಿಸಲಾಗಿತ್ತು. ಆದರೆ ಆ ಶಾಖೆಯ ಕರ್ತವ್ಯಕ್ಕೆ ಹಾಜರಾಗಿಲ್ಲ. ಕಳೆದ ಜೂನ್ 13 ರಿಂದ ಜುಲೈ 6, 2024 ರ ನಡುವೆ ಗ್ರಾಹಕರು ಗಿರವಿ ಇಟ್ಟಿದ್ದ 42 ಖಾತೆಗಳಿಗೆ ಸಂಬಂಧಿಸಿದ ಚಿನ್ನವನ್ನು ಕದ್ದೊಯ್ಯಲಾಗಿದೆ. ವಡಕರ ವೃತ್ತ ನಿರೀಕ್ಷಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸೆಕ್ಷನ್ 409 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ
A bank manager allegedly absconded with gold worth more than Rs 17 crore pledged in a Bank of Maharashtra branch in Kerala's Kozhikode replacing the same with fake gold. The accused, identified as Madha Jayakumar (34), a resident of Mettupalayam Pathi Street in Tamil Nadu, served as the manager of the Bank of Maharashtra's Vadakara branch. Jayakumar allegedly disappeared with over 26 kilograms of gold, which was discovered missing during a re-appraisal process at the branch.
30-07-25 11:40 am
Bangalore Correspondent
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 03:00 pm
Mangalore Correspondent
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
30-07-25 11:37 am
HK News Desk
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm