ಬ್ರೇಕಿಂಗ್ ನ್ಯೂಸ್
23-08-24 06:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆಲಿಂಗಿಸಿಕೊಂಡು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.







ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ. ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳನ್ನು ನಡೆಸುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಪೋಲಂಡಿನಿಂದ ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿ ಕೀವ್ ತಲುಪಿದ್ದಾರೆ. ಈ ಮೂಲಕ ಉಕ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಎರಡು ತಿಂಗಳ ಹಿಂದೆ ಮಾಸ್ಕೋಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್ಸ್ಕಿ ಟೀಕಿಸಿದ್ದರು. ಈ ಬಾರಿ ಉಕ್ರೇನ್ ಭೇಟಿ ನೀಡುವ ಮೊದಲೇ ಸಮಸ್ಯೆಗಳಿಗೆ ಯುದ್ಧ ಪರಿಹಾರ ಅಲ್ಲ ಎಂದು ಹೇಳುವ ಮೂಲಕ ಎರಡು ರಾಷ್ಟ್ರಗಳಿಗೂ ಕಿವಿಮಾತು ಮುಟ್ಟಿಸಿದ್ದಾರೆ.
PM Narendra Modi is in Ukraine for his much-anticipated trip after wrapping up his two-day visit to Poland this morning. He met the Ukrainian PM Volodymyr Zelenskyy, upon whose invite he is visiting the conflict-hit nation-state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm