ಬ್ರೇಕಿಂಗ್ ನ್ಯೂಸ್
25-08-24 04:00 pm HK News Desk ದೇಶ - ವಿದೇಶ
ಕೊಚ್ಚಿ, ಆಗಸ್ಟ್.25: ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತಗಳು ಮಾನವನ ಅಸಡ್ಡೆ ಮತ್ತು ದುರಾಸೆಗೆ ಪ್ರಕೃತಿ ಪ್ರತಿಕ್ರಿಯಿಸಿರುವ ಇನ್ನೊಂದು ನಿದರ್ಶನವಾಗಿದೆ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಬಹಳ ಹಿಂದೆಯೇ ಎಚ್ಚರಿಕೆಯ ಸಂಕೇತಗಳು ಕಾಣಿಸಿಕೊಂಡಿದ್ದವು, ಆದರೆ ರಾಜ್ಯವನ್ನು ಆರ್ಥಿಕ ಸಮೃದ್ಧಿಯ ಪಥದಲ್ಲಿ ಇರಿಸಲಿದೆ ಎಂದು ಭಾವಿಸಿದ್ದ ಅಭಿವೃದ್ಧಿಯ ಅಜೆಂಡಾದ ಅನ್ವೇಷಣೆಯ ಹಿಂದೆ ಬಿದ್ದಿದ್ದ ನಾವು ಅವುಗಳನ್ನು ನಿರ್ಲಕ್ಷಿಸಿದ್ದೆವು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
2018 ಮತ್ತು 2019ರ ಪ್ರಕೃತಿ ವಿಕೋಪಗಳು ಹಾಗೂ ಸುಮಾರು ಎರಡು ವರ್ಷಗಳ ವರೆಗೆ ಕಾಡಿದ್ದ ಕೋವಿಡ್ ಸಾಂಕ್ರಾಮಿಕ ಮತ್ತು ಇತ್ತೀಚಿನ ಭೂಕುಸಿತಗಳು ನಾವು ತಪ್ಪು ಮಾರ್ಗದಲ್ಲಿ ಸಾಗುತ್ತಿದ್ದೇವೆ ಎನ್ನುವುದನ್ನು ತೋರಿಸಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಜು.30ರ ವಯನಾಡ್ ಭೂಕುಸಿತ ಕೋರ್ಟ್ ಬಳಿಕ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಶ್ಯಾಮಕುಮಾರ ವಿ.ಎಂ. ಅವರಿದ್ದ ಪೀಠವು, ‘ನಾವು ಈಗಲೂ ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮತ್ತು ದೃಢವಾದ ಪರಿಹಾರ ಕ್ರಮವನ್ನು ತೆಗೆದುಕೊಳ್ಳದಿದ್ದರೆ ಮತ್ತಷ್ಟು ಅನಾಹುತಕ್ಕೆ ಕಾರಣವಾಗಬಹುದು ಎಂದು ಬೊಟ್ಟು ಮಾಡಿದ್ದಾರೆ.
ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತಗಳು ಮೂರು ಗ್ರಾಮಗಳನ್ನು ಸಂಪೂರ್ಣವಾಗಿ ನಿರ್ನಾಮಗೊಳಿಸಿವೆ. 300ಕ್ಕೂ ಅಧಿಕ ಜೀವಗಳು ಬಲಿಯಾಗಿದ್ದು, 119 ಜನರು ಈಗಲೂ ನಾಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಕಲ್ಪನೆಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವಂತೆ ಮತ್ತು ಇದಕ್ಕೆ ಸಂಬಂಧಿಸಿದಂತೆ ನೀತಿಯನ್ನು ಪುನರ್ಪರಿಶೀಲನೆ ಮಾಡುವಂತೆ ರಾಜ್ಯ ಸರಕಾರದ ಮನವೊಲಿಸಲು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಆರಂಭಿಸಿರುವುದಾಗಿ ಉಚ್ಚ ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.
Kerala High Court remarked on Saturday that the recent landslides in Wayanad are yet another example of nature responding to human "apathy and greed." The court observed that "warning signs" had been evident for a long time, but "we chose to ignore them in pursuit of a development agenda that would supposedly put our state on the high road to economic prosperity."
12-09-24 10:41 pm
Bangalore Correspondent
MLA Pradeep Eshwar VS Sudhakar: ಸುಧಾಕರ್ ಒಬ್ಬ...
12-09-24 09:44 pm
Pilikula kamabala, Bangalore: ಪಿಲಿಕುಳ ಕಂಬಳಕ್ಕ...
12-09-24 09:13 pm
Parashuram Park, Sunil Kumar, Arun Shyam, Hig...
12-09-24 02:34 pm
ಉದ್ಯಮಿಯ ಕಂಪನಿ ಮೇಲೆ ದಾಳಿ, ಕಿಡ್ನಾಪ್ ಮಾಡಿ ಹಲ್ಲೆ...
11-09-24 10:11 pm
13-09-24 12:33 pm
HK News Desk
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ಗಣೇಶ...
12-09-24 07:40 pm
ಅಮರಾವತಿಯಲ್ಲಿ ಡೆಡ್ಲಿ ರಸ್ತೆ ಗುಂಡಿ ; ಕಾಲುವೆಗೆ ಉರ...
11-09-24 04:13 pm
13-09-24 11:20 am
Mangalore Correspondent
Mangalore, St Antony bus, HK News: HK Impact:...
12-09-24 10:21 pm
VHP protest, Mangalore, Sharan Pumpwell: ಈದ್...
12-09-24 08:24 pm
Mangalore artist Zuber Khan kudla, MF Husain...
12-09-24 08:12 pm
House Collapsed, Bejai Mangalore: ಹಳೆ ಮನೆ ಕೆಡ...
12-09-24 04:57 pm
13-09-24 03:51 pm
HK News Desk
Mangalore, Vitla, Rape, Crime: ಅಪ್ರಾಪ್ತ ವಿದ್ಯ...
13-09-24 01:28 pm
Mangalore, City Bus, St Antony Travels: ಸಿಟಿ...
12-09-24 05:37 pm
Mandya Stone Pelting, Ganpati; ನಾಗಮಂಗಲದಲ್ಲಿ ಗ...
12-09-24 01:37 pm
Bangalore crime, Suicide: ಅಶ್ಲೀಲ ವಿಡಿಯೋ ತೋರಿಸ...
07-09-24 05:45 pm