ಬ್ರೇಕಿಂಗ್ ನ್ಯೂಸ್
25-08-24 10:56 pm HK News Desk ದೇಶ - ವಿದೇಶ
ಹೈದರಾಬಾದ್, ಆಗಸ್ಟ್ 25: ತೆಲಂಗಾಣ ಮೂಲದ 27 ವರ್ಷದ ಯುವಕನೊಬ್ಬ ಸಹೋದ್ಯೋಗಿ ಜೊತೆ ಸೌದಿ ಅರೇಬಿಯಾದ ಭಯಾನಕ ಮರಳುಗಾಡಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸೌದಿಯ ಅಪಾಯಕಾರಿ ರಬ್ ಅಲ್ ಖಲಿ ಮರುಭೂಮಿಯಲ್ಲಿ ಈ ದುರಂತ ಸಂಭವಿಸಿದೆ.
ತೆಲಂಗಾಣದ ಕರೀಮ್ ನಗರ ನಿವಾಸಿಯಾಗಿದ್ದ ಮೊಹಮ್ಮದ್ ಶೆಹಜಾದ್ ಖಾನ್ ಮೃತ ದುರ್ದೈವಿ. ಕಳೆದ ಮೂರು ವರ್ಷಗಳಿಂದ ಸೌದಿ ಅರೇಬಿಯಾದ ಟೆಲಿಕಾಂ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಜಗತ್ತಿನ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದು ಎಂದೇ ಹೇಳಲಾಗಿರುವ ರಬ್ ಅಲ್ ಖಲಿ ಮರುಭೂಮಿಯ ಎಂಪ್ಟಿ ಕ್ವಾರ್ಟರ್ ಎಂಬ ನಿರ್ಜನ ಭಾಗದಲ್ಲಿ ಸಿಲುಕಿಕೊಂಡ ಶೆಹಜಾದ್ ಖಾನ್ ಜೀವ ಕಳೆದುಕೊಂಡಿದ್ದಾನೆ. ಈತ ಸುಡಾನ್ ಮೂಲದ ವ್ಯಕ್ತಿಯ ಜೊತೆಗೆ ತಿರುಗಾಡಲು ಹೋಗಿದ್ದು ಆತನೂ ಅನ್ನ, ನೀರು ಸಿಗದೆ ಮರಳಿನಲ್ಲಿ ಬಿದ್ದು ಸತ್ತಿದ್ದಾನೆ.
650 ಕಿಮೀಗೂ ಅಧಿಕ ವಿಸ್ತಾರ ಪ್ರದೇಶದಲ್ಲಿ ಚಾಚಿಕೊಂಡಿರುವ ರಬ್ ಅಲ್ ಖಲಿ ಮರುಭೂಮಿ, ಸೌದಿ ಅರೇಬಿಯಾದ ದಕ್ಷಿಣ ಪ್ರದೇಶ ಹಾಗೂ ನೆರೆಯ ದೇಶಗಳ ವರೆಗೂ ಹರಡಿದೆ. ಇಲ್ಲಿನ ಕಠೋರ ವಾತಾವರಣ ಪರಿಸ್ಥಿತಿ ಕಾರಣದಿಂದ ಇದನ್ನು ‘ನಟೋರಿಯಸ್’ ಜಾಗ ಎಂದೇ ಕರೆಯಲಾಗುತ್ತದೆ.
ಸುಡಾನ್ ದೇಶದ ಪ್ರಜೆ, ಸಹೋದ್ಯೋಗಿ ಜತೆ ಶೆಹಜಾದ್ ಖಾನ್ ಮರಳುಗಾಡಿನ ಪ್ರಯಾಣದ ಅನುಭವ ಪಡೆಯಲು ತೆರಳಿದ್ದ.
ಆದರೆ ಅವರ ಮೊಬೈಲ್ ಬ್ಯಾಟರಿ ಮುಗಿದು ಜಿಪಿಎಸ್ ಸಿಗ್ನಲ್ ಕೈಕೊಟ್ಟಿದ್ದರಿಂದ ಇಬ್ಬರೂ ಅಪಾಯಕ್ಕೆ ಸಿಲುಕಿದ್ದಾರೆ. ಶೆಹಜಾದ್ನ ಮೊಬೈಲ್ ಫೋನ್ ಬ್ಯಾಟರಿ ಡೆಡ್ ಆಗಿದ್ದರಿಂದ ಅವರಿಬ್ಬರೂ ಸಹಾಯಕ್ಕಾಗಿ ಕರೆ ಮಾಡುವುದು ಸಾಧ್ಯವಾಗಿರಲಿಲ್ಲ. ದಾರಿ ಹುಡುಕುವ ಪ್ರಯತ್ನದಲ್ಲಿ ಅವರ ವಾಹನದ ಇಂಧನ ಕೂಡ ಖಾಲಿಯಾಗಿದೆ. ಬೆಂಕಿಯಂತೆ ಸುಡುತ್ತಿರುವ ಬಿಸಿಲ ತಾಪ ಒಂದೆಡೆಯಾದರೆ, ಬಾಯಾರಿಕೆ ದಣಿವಾರಿಸಲು ನೀರು ಮತ್ತು ಆಹಾರ ಸಿಗದೆ ಒದ್ದಾಡಿದ್ದಾರೆ. ತಾಪಮಾನ ಸಹಿಲಾಗದಷ್ಟು ವಿಪರೀತ ಮಟ್ಟಕ್ಕೆ ತಲುಪಿದಾಗ ಜೀವ ಉಳಿಸಿಕೊಳ್ಳಲು ಇಬ್ಬರೂ ಶಕ್ತಿಮೀರಿ ಹೋರಾಡಿದ್ದಾರೆ. ಆದರೆ ಪ್ರಕೃತಿ ಮುಂದೆ ಅವರ ಪ್ರಯತ್ನ ಸಫಲವಾಗಿಲ್ಲ. ಒಣಗುತ್ತಿದ್ದ ಗಂಟಲನ್ನು ತೇವ ಮಾಡಿಕೊಳ್ಳಲಾಗದಷ್ಟು ಇಡೀ ದೇಹ ಒಣಗಿತ್ತು. ನಿರ್ಜಲೀಕರಣ ಹಾಗೂ ಬಳಲಿಕೆಯಿಂದ ಹೈರಾಣಾದ ಇಬ್ಬರೂ ಅಲ್ಲಿಯೇ ದಾರುಣ ಅಂತ್ಯ ಕಂಡಿದ್ದಾರೆ. ನಾಲ್ಕು ದಿನಗಳ ಬಳಿಕ, ಕಳೆದ ಗುರುವಾರ ಶೆಹಜಾದ್ ಮತ್ತು ಆತನ ಸಹೋದ್ಯೋಗಿಯ ಶವಗಳು ಮರಳಿನ ದಿಬ್ಬಗಳ ನಡುವೆ ನಿಂತಿದ್ದ ಅವರ ವಾಹನದ ಪಕ್ಕದಲ್ಲಿ ಪತ್ತೆಯಾಗಿವೆ.
The sun is extremely hot in Saudi Arabia, and two people have died due to the high temperatures. A resident of Telangana, India went missing in the southern desert of Saudi Arabia, known as the empty quarter or Rab al-Khali in Arabic, which is one of the most desolate places on earth. 27-year-old Mohammad Shahzad Khan died of dehydration due to constant walking in the sun. He was identified as a resident of Karimnagar in Telangana.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm