ಬ್ರೇಕಿಂಗ್ ನ್ಯೂಸ್
27-08-24 10:52 am HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರನೌತ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರ ಮಾಡಿರುವ ಎಮರ್ಜೆನ್ಸಿ ಎಂಬ ಚಲನಚಿತ್ರ ಸೆಪ್ಟಂಬರ್ 6ರಂದು ಬಿಡುಗಡೆಯಾಗಲಿದೆ. ಇಂದಿರಾ ಗಾಂಧಿ ವೇಷದಲ್ಲಿರುವ ಕಂಗನಾ ಪೋಸ್ಟರ್ ಹೊರಬಂದಿದ್ದು, ರಾಜಕೀಯದಲ್ಲಿ ಸಂಚಲನ ಎಬ್ಬಿಸುವ ಸಾಧ್ಯತೆಯಿದೆ. ಇದರ ನಡುವಲ್ಲೇ ಕಂಗನಾಗೆ ಜೀವ ಬೆದರಿಕೆ ಒಡ್ಡಲಾಗಿದೆ.
ಸಿಖ್ ವ್ಯಕ್ತಿಗಳಿಬ್ಬರು ಚಿತ್ರದಲ್ಲಿ ಸಿಕ್ಖರನ್ನು ವಿಲನ್ ಆಗಿಸಿ ತೋರಿಸಿದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಓಪನ್ ಆವಾಜ್ ಹಾಕಿದ್ದಾರೆ. ಇಬ್ಬರು ವ್ಯಕ್ತಿಗಳು ಕುಳಿತು ಮಾತನಾಡುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಖರನ್ನು ವಿಲನ್ ಆಗಿ ತೋರಿಸಿದರೆ, ಶಿರಚ್ಛದಕ್ಕೂ ಹೇಸಲ್ಲ. ಇಡೀ ದೇಶದಲ್ಲಿ ಹಿಂದು, ಸಿಖ್, ಕ್ರಿಸ್ತಿಯನ್, ಮುಸ್ಲಿಮರು ಎನ್ನುವ ಭೇದ ಇಲ್ಲದೆ ಚಪ್ಪಲಿಯಲ್ಲಿ ಕಪಾಳ ಮೋಕ್ಷ ಮಾಡಲಿದ್ದಾರೆ ಎಂದು ಬೆದರಿಕೆ ಹಾಕಿದ್ದಾರೆ.


ಇಬ್ಬರು ವ್ಯಕ್ತಿಗಳ ಬೆದರಿಕೆ ವಿಡಿಯೋವನ್ನು ಕಂಗನಾ ಅವರು ಹಿಮಾಚಲ ಪ್ರದೇಶದ ಡಿಜಿಪಿಗೆ ಟ್ಯಾಗ್ ಮಾಡಿದ್ದಾರೆ. 1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಚಿತ್ರಣದ ಕತೆಯನ್ನಾಧರಿಸಿ ಎಮರ್ಜೆನ್ಸಿ ಚಿತ್ರವನ್ನು ಮಾಡಲಾಗಿದೆ. 1984ರಲ್ಲಿ ಇಂದಿರಾ ಗಾಂಧಿಯನ್ನು ತುರ್ತು ಸ್ಥಿತಿ ಹೇರಿದ ಕಾರಣಕ್ಕಾಗಿಯೇ ಆಕೆಯ ಸಿಖ್ ಅಂಗರಕ್ಷಕರೇ ಗುಂಡು ಹಾರಿಸಿ ಕೊಂದಿದ್ದರು. ಆನಂತರ, ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಸಾವಿರಾರು ಸಿಕ್ಖರ ಮಾರಣ ಹೋಮ ನಡೆದಿತ್ತು. ಇಂದಿರಾ ಅವರನ್ನು ಸಿಕ್ಖರು ಕೊಂದಿದ್ದಾರೆಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ದೂರವೇ ಇಟ್ಟಿದೆ. ಇದೀಹ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಂಗನಾ ರನೌತ್, ತಾನೇ ಇಂದಿರಾ ಗಾಂಧಿ ಪಾತ್ರ ಮಾಡಿದ್ದಲ್ಲದೆ, ಎಮರ್ಜೆನ್ಸಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
BJP MP from Mandi and actor Kangana Ranaut has received beheading threats from extremist Sikh groups after the release of her upcoming movie trailer. She is playing the role of former PM Indira Gandhi in 'Emergency' which is to be released on September 6. After the threatening video went viral, the actor sought police help.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am