ಬ್ರೇಕಿಂಗ್ ನ್ಯೂಸ್
01-09-24 03:03 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ ಬ್ರ್ಯಾಂಡ್ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ಗೆ ದೂರು ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲ ಯತಿನ್ ಶರ್ಮಾ ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ.
ದಿವ್ಯ ಮಂಜನ್’ನಲ್ಲಿ ಸಮುದ್ರ ಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದೆ ಎಂದು ರಾಮ್ದೇವ್ ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಇದನ್ನು ತಪ್ಪಾಗಿ ಪ್ಯಾಕೇಜ್ ಮಾಡಿದ್ದು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಇದರಿಂದ ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ನೋವು ನೀಡಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 28ರಂದು ನಿಗದಿಪಡಿಸಲಾಗಿದೆ.
In fresh legal trouble for Yoga guru Baba Ramdev, a plea has been filed in the Delhi High Court against his Patanjali Ayurved, alleging that the brand's herbal tooth powder, ‘Divya Manjan’, which is marketed as vegetarian, contains non-vegetarian ingredients.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm