ಬ್ರೇಕಿಂಗ್ ನ್ಯೂಸ್
01-09-24 03:03 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ ಬ್ರ್ಯಾಂಡ್ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ಗೆ ದೂರು ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲ ಯತಿನ್ ಶರ್ಮಾ ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ.

ದಿವ್ಯ ಮಂಜನ್’ನಲ್ಲಿ ಸಮುದ್ರ ಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದೆ ಎಂದು ರಾಮ್ದೇವ್ ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಇದನ್ನು ತಪ್ಪಾಗಿ ಪ್ಯಾಕೇಜ್ ಮಾಡಿದ್ದು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಇದರಿಂದ ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ನೋವು ನೀಡಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 28ರಂದು ನಿಗದಿಪಡಿಸಲಾಗಿದೆ.
In fresh legal trouble for Yoga guru Baba Ramdev, a plea has been filed in the Delhi High Court against his Patanjali Ayurved, alleging that the brand's herbal tooth powder, ‘Divya Manjan’, which is marketed as vegetarian, contains non-vegetarian ingredients.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm