ಮುಂಬೈನಲ್ಲಿ ಶಿವಾಜಿ ಪ್ರತಿಮೆ ಕುಸಿತಕ್ಕೆದುರಾಗಿ ಬೃಹತ್ ಪ್ರತಿಭಟನೆ ; ಮರಾಠಿಗರ ಅಸ್ಮಿತೆಗಾದ ಅವಮಾನ, ಪ್ರತಿಮೆ ಕುಸಿತವನ್ನು ಮರಾಠರು ಎಂದಿಗೂ ಕ್ಷಮಿಸಲ್ಲ.. ಉದ್ಧವ್ ಠಾಕ್ರೆ ಆಕ್ರೋಶ 

01-09-24 07:57 pm       HK News Desk   ದೇಶ - ವಿದೇಶ

ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತವನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಮುಂಬೈ ನಗರದ ಗೇಟ್‌ ವೇ ಆಫ್ ಇಂಡಿಯಾ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮುಂಬೈ, ಸೆ.1: ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತವನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಮುಂಬೈ ನಗರದ ಗೇಟ್‌ ವೇ ಆಫ್ ಇಂಡಿಯಾ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಮತ್ತು ಶಿವಸೇನೆ ಉದ್ಧವ್ ಬಣದ ಕಾರ್ಯಕರ್ತರು ಸೇರಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಮಾಜಿ ಸಿಎಂ ಉದ್ಧವ್ ಠಾಕ್ರೆ ಮಾತನಾಡಿ, ಮಹಾರಾಷ್ಟ್ರದ ಜನರು ಶಿವಾಜಿ ಪ್ರತಿಮೆ ಕುಸಿತವನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದರೂ ಕಾರ್ಯಕರ್ತರು ಬೃಹತ್ ಮೆರವಣಿಗೆ ನಡೆಸಿದ್ದಾರೆ. ಮಹಾ ವಿಕಾಸ್ ಅಘಾಡಿ ನೇತೃತ್ವದ ಪ್ರತಿಭಟನಾ ಮೆರವಣಿಗೆಯಲ್ಲಿ ಬೃಹತ್ ಸಂಖ್ಯೆಯ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಕುಸಿತಕ್ಕಾಗಿ ಎಂವಿಎ ನಾಯಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡರು. ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆಯನ್ನು ಒಂದು “ದುರಹಂಕಾರಕ್ಕೆ ಹೊಡೆತ” ಎಂದು ಬಣ್ಣಿಸಿದರು. ಆದರೆ ಶರದ್ ಪವಾರ್ ಈ ಪ್ರಕರಣ ಭ್ರಷ್ಟಾಚಾರಕ್ಕೆ ಉದಾಹರಣೆ ಎಂದು ಹೇಳಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಯಾಚನೆಯನ್ನು ಉಲ್ಲೇಖಿಸಿ, ಅದರಲ್ಲಿನ ದುರಹಂಕಾರವನ್ನು ನೀವು ಗಮನಿಸಿದ್ದೀರಾ? ಇದು ದುರಹಂಕಾರದ ಪರಮಾವಧಿ. ಪೌರಾಣಿಕ ಹಿನ್ನೆಲೆಯ ರಾಜನಿಗೆ ಆಗಿರುವ ಅವಮಾನವನ್ನು ಮಹಾರಾಷ್ಟ್ರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಪ್ರತಿಪಾದಿಸಿದರು. ಪ್ರತಿಮೆ ಕುಸಿತ, ರಾಮ ಮಂದಿರದಲ್ಲಿನ ಸೋರಿಕೆ ಮತ್ತು ಹೊಸ ಸಂಸತ್ತಿನ ಸಂಕೀರ್ಣ ಸೋರಿಕೆಯನ್ನು ಮೋದಿಯ “ಗ್ಯಾರಂಟಿ” ಘೋಷಣೆಗೆ ಸಾಕ್ಷಿ ಅಣಕಿಸಿದರು.

“ಪ್ರಧಾನಿ ಯಾವುದಕ್ಕಾಗಿ ಕ್ಷಮೆ ಕೇಳುತ್ತಿದ್ದರು? ಎಂಟು ತಿಂಗಳ ಹಿಂದೆ ಅವರು ಉದ್ಘಾಟಿಸಿದ ಪ್ರತಿಮೆಗಾಗಿಯೇ? ಅದರಲ್ಲಿ ಆಗಿರುವ ಭ್ರಷ್ಟಾಚಾರಕ್ಕಾಗಿಯೇ? ಶಿವಾಜಿ ಮಹಾರಾಜರನ್ನು ಅವಮಾನಿಸಿದ ಶಕ್ತಿಗಳನ್ನು ಸೋಲಿಸಲು ಎಂವಿಎ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಮೆಯ ಕುಸಿತವು ಮಹಾರಾಷ್ಟ್ರದ ಆತ್ಮಕ್ಕೆ ಮಾಡಿದ ಅವಮಾನ ಎಂದು ಅವರು ಪ್ರತಿಪಾದಿಸಿದರು.

Congress spokesperson Pawan Khera said on Sunday that the collapse of Chhatrapati Shivaji Maharaj's statue in Maharashtra's Sindhudurg district has broken the hearts of people in the country who draw inspiration from the legendary warrior king. Addressing a press conference here, Khera accused Deputy Chief Minister Devendra Fadnavis of spreading fake narratives over the incident.