ಬ್ರೇಕಿಂಗ್ ನ್ಯೂಸ್
04-09-24 03:05 pm HK News Desk ದೇಶ - ವಿದೇಶ
ಕೊಲ್ಕತ್ತಾ, ಸೆ.4: ಅತ್ಯಾಚಾರ ಸೇರಿದಂತೆ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಮತ್ತು ಇಂತಹ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸುವ ನಿಟ್ಟಿನಲ್ಲಿ ಅತ್ಯಾಚಾರ ತಡೆ ವಿಧೇಯಕವನ್ನು ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ ಮಂಡಿಸಿದ್ದು ಅನುಮೋದನೆ ಪಡೆದಿದೆ.
ಕೋಲ್ಕತ್ತಾ ಆಸ್ಪತ್ರೆಯಲ್ಲಿ ಯುವ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು ತೀವ್ರ ಒತ್ತಡಕ್ಕೆ ಸಿಲುಕಿತ್ತು. ಹೀಗಾಗಿ ಅತ್ಯಾಚಾರ, ಕೊಲೆ ಪ್ರಕರಣಗಳಲ್ಲಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಮುಂದಾಗಿದೆ. ಕಳೆದ ವಾರ ಈ ಸಂಬಂಧ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದುಕೊಂಡಿದ್ದ ಸರ್ಕಾರ ಅಸೆಂಬ್ಲಿಯಲ್ಲಿ ಅನುಮೋದನೆ ಪಡೆಯುವುದಕ್ಕಾಗಿ ಸೆ.2ರಿಂದ ವಿಶೇಷ ಅಧಿವೇಶನ ನಡೆಸಲಾಗುತ್ತಿದೆ. ಮಂಗಳವಾರ ಸದನದಲ್ಲಿ ಅಪರಾಜಿತ ಮಹಿಳಾ ಮತ್ತು ಮಕ್ಕಳ ಬಿಲ್ 2024 ಕಾಯ್ದೆಯನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಚಕ್ ಮಂಡಿಸಿದ್ದು ಸರ್ವಪಕ್ಷಗಳ ನಾಯಕರಿಂದ ಒಮ್ಮತದೊಂದಿಗೆ ವಿಧೇಯಕ ಅಂಗೀಕಾರಗೊಂಡಿದೆ.
ಮಹಿಳೆಯರು ಹಾಗೂ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಅಪರಾಧಗಳಿಗೆ ಸದ್ಯ ಇರುವ ಶಿಕ್ಷೆಯ ಪ್ರಮಾಣ ಹೆಚ್ಚಳ (ಕಠಿಣ) ಮಾಡುವುದು ಹಾಗೂ ವೇಗವಾಗಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೆ ಒಳಡಿಸುವುದು ಮಸೂದೆಯ ಉದ್ದೇಶವಾಗಿದೆ. ಸದ್ಯ ವಿಧಾನಸಭೆಯಲ್ಲಿ ಮಂಡನೆಯಾಗಿದ್ದು, ಸೆಪ್ಟೆಂಬರ್ 5 ರಂದು ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ. ರಾಜ್ಯಪಾಲರು ಅಂಕಿತ ಹಾಕಿದರೆ, ಅದೇ ದಿನದಿಂದ ಕಾನೂನು ಜಾರಿಗೆ ಬರಲಿದೆ.
ಅತ್ಯಾಚಾರಗೈದು ಭೀಕರ ಕೊಲೆ ನಡೆಸಿರುವುದು ಸಾಬೀತಾದರೆ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ/ ಜೀವಾವಧಿ ಶಿಕ್ಷೆ ವಿಧಿಸಲು ವಿಧೇಯಕದಲ್ಲಿ ಅನುಮತಿ ಇದೆ. ಈ ಶಿಕ್ಷೆ ಸಂದರ್ಭದಲ್ಲಿ ಅಪರಾಧಿಗೆ ಪರೋಲ್ ನೀಡಲಾಗುವುದಿಲ್ಲ. ಆರೋಪ ಸಾಬೀತಾದ 10 ದಿನದಲ್ಲಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಈ ಬಿಲ್ ಅನುಮತಿಸುತ್ತದೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಭಾರತದಲ್ಲಿ ಇದೇ ಮೊದಲು ಪಶ್ಚಿಮ ಬಂಗಾಳದಲ್ಲಿ ಜಾರಿಗೆ ಬಂದಿದೆ ಎನ್ನಲಾಗಿದೆ.
ಮಸೂದೆಯಲ್ಲಿ ಏನಿದೆ ?
ಮಸೂದೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಮಾಡುವ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಅವಕಾಶವಿದೆ.
Amid massive protests over the rape and murder of a 31-year-old doctor in Kolkata's RG Kar Medical College and Hospital, the West Bengal Assembly today passed the Aparajita Bill to amend some provisions in the criminal code, Bharatiya Nyaya Sanhita, for the state. These amendments make penalties for rape and child abuse more stringent.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am